3:12 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡ

05/08/2021, 09:38

reporterKarnataka.com

ಒಲಿಂಪಿಕ್ಸ್‌ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ಮೂಲಕ ಭಾರತ ಹಾಕಿ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಟೈಮೂರ್ ಗೋಲು ಬಾರಿಸುವ ಮೂಲಕ ಜರ್ಮನಿಗೆ 1-0 ಮುನ್ನಡೆ ಒದಗಿಸಿಕೊಟ್ಟರು. ಇದರೊಂದಿಗೆ ಮೊದಲ ಕ್ವಾರ್ಟರ್‌ನಲ್ಲಿ ಜರ್ಮನಿ 1-0 ಮುನ್ನಡೆ ಕಾಯ್ದುಕೊಂಡಿತು. ಇನ್ನು ಎರಡನೇ ಕ್ವಾರ್ಟರ್‌ನಲ್ಲಿ ಕಮ್‌ಬ್ಯಾಕ್‌ ಮಾಡುವಲ್ಲಿ ಭಾರತ ಯಶಸ್ವಿಯಾಯಿತು. ಎರಡನೇ ಕ್ವಾರ್ಟರ್‌ನಲ್ಲಿ ಭಾರತ ಮೂರು ಗೋಲು ಬಾರಿಸಿದರೆ, ಜರ್ಮನಿ ಎರಡು ಗೋಲು ಬಾರಿಸಿತು. ಇದರೊಂದಿಗೆ ಮೊದಲಾರ್ಧ ಮುಕ್ತಾಯದ ವೇಳೆಗೆ 3-3ರ ಸಮಬಲ ಸಾಧಿಸಿತು.

ಇನ್ನು ಮೂರನೇ ಕ್ವಾರ್ಟರ್‌ನಲ್ಲಿ ಮತ್ತಷ್ಟು ಆಕ್ರಮಣಕಾರಿ ಪ್ರದರ್ಶನ ತೋರಿದ ಮನ್‌ಪ್ರೀತ್‌ ಪಡೆ ಮತ್ತೆರಡು ಗೋಲು ಬಾರಿಸುವ ಮೂಲಕ ಭಾರತಕ್ಕೆ 5-3ರ ಮುನ್ನಡೆ ಒದಗಿಸಿಕೊಟ್ಟಿತು. ಇನ್ನು ಕೊನೆಯ ಕ್ವಾರ್ಟರ್‌ನಲ್ಲಿ ಜರ್ಮನಿ ಕೇವಲ ಒಂದು ಗೋಲು ಗಳಿಸಲಷ್ಟೇ ಶಕ್ತವಾಯಿತು.

ಭಾರತ ಹಾಕಿ ತಂಡವು 1980ರ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಜರ್ಮನಿಗೆ ಬರೋಬ್ಬರಿ 13 ಪೆನಾಲ್ಟಿ ಕಾರ್ನರ್‌ ಗಳಿಸುವ ಅವಕಾಶವಿದ್ದರೂ ಕೇವಲ ಒಂದು ಗೋಲು ಗಳಿಸಲಷ್ಟೇ ಜರ್ಮನಿ ಶಕ್ತವಾಯಿತು. ಗೋಲ್ ಕೀಪರ್ ಶ್ರೀಜೆಶ್ ಕೂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು