2:27 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡ

05/08/2021, 09:38

reporterKarnataka.com

ಒಲಿಂಪಿಕ್ಸ್‌ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ಮೂಲಕ ಭಾರತ ಹಾಕಿ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಟೈಮೂರ್ ಗೋಲು ಬಾರಿಸುವ ಮೂಲಕ ಜರ್ಮನಿಗೆ 1-0 ಮುನ್ನಡೆ ಒದಗಿಸಿಕೊಟ್ಟರು. ಇದರೊಂದಿಗೆ ಮೊದಲ ಕ್ವಾರ್ಟರ್‌ನಲ್ಲಿ ಜರ್ಮನಿ 1-0 ಮುನ್ನಡೆ ಕಾಯ್ದುಕೊಂಡಿತು. ಇನ್ನು ಎರಡನೇ ಕ್ವಾರ್ಟರ್‌ನಲ್ಲಿ ಕಮ್‌ಬ್ಯಾಕ್‌ ಮಾಡುವಲ್ಲಿ ಭಾರತ ಯಶಸ್ವಿಯಾಯಿತು. ಎರಡನೇ ಕ್ವಾರ್ಟರ್‌ನಲ್ಲಿ ಭಾರತ ಮೂರು ಗೋಲು ಬಾರಿಸಿದರೆ, ಜರ್ಮನಿ ಎರಡು ಗೋಲು ಬಾರಿಸಿತು. ಇದರೊಂದಿಗೆ ಮೊದಲಾರ್ಧ ಮುಕ್ತಾಯದ ವೇಳೆಗೆ 3-3ರ ಸಮಬಲ ಸಾಧಿಸಿತು.

ಇನ್ನು ಮೂರನೇ ಕ್ವಾರ್ಟರ್‌ನಲ್ಲಿ ಮತ್ತಷ್ಟು ಆಕ್ರಮಣಕಾರಿ ಪ್ರದರ್ಶನ ತೋರಿದ ಮನ್‌ಪ್ರೀತ್‌ ಪಡೆ ಮತ್ತೆರಡು ಗೋಲು ಬಾರಿಸುವ ಮೂಲಕ ಭಾರತಕ್ಕೆ 5-3ರ ಮುನ್ನಡೆ ಒದಗಿಸಿಕೊಟ್ಟಿತು. ಇನ್ನು ಕೊನೆಯ ಕ್ವಾರ್ಟರ್‌ನಲ್ಲಿ ಜರ್ಮನಿ ಕೇವಲ ಒಂದು ಗೋಲು ಗಳಿಸಲಷ್ಟೇ ಶಕ್ತವಾಯಿತು.

ಭಾರತ ಹಾಕಿ ತಂಡವು 1980ರ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಜರ್ಮನಿಗೆ ಬರೋಬ್ಬರಿ 13 ಪೆನಾಲ್ಟಿ ಕಾರ್ನರ್‌ ಗಳಿಸುವ ಅವಕಾಶವಿದ್ದರೂ ಕೇವಲ ಒಂದು ಗೋಲು ಗಳಿಸಲಷ್ಟೇ ಜರ್ಮನಿ ಶಕ್ತವಾಯಿತು. ಗೋಲ್ ಕೀಪರ್ ಶ್ರೀಜೆಶ್ ಕೂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು