3:49 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಇಡೀ ವಿಶ್ವವೇ ತಿರುಗಿ ನೋಡುವಷ್ಟರ ಮಟ್ಟಿಗೆ ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಲಿದೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

15/02/2025, 19:35

ಬೆಂಗಳೂರು(reporterkarnataka.com): ರೈಲ್ಚೇ ಕ್ಷೇತ್ರದಲ್ಲಿ ಇಡೀ ವಿಶ್ವವೇ ತಿರುಗಿನೋಡುವ ಮಟ್ಟಿಗೆ ಅಭಿವೃದ್ಧಿಯಾಗಲಿದ್ದು ಅದರಲ್ಲೂ ವಿಶೇಷವಾಗಿ ಕರ್ನಾಟಕ ರಾಜ್ಯದ ಪ್ರತಿ ರೈಲು ನಿಲ್ದಾಣಗಳನ್ನೂ ಮೇಲ್ದರ್ಜೆಗೇರಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
ಅವರು ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೇಂದ್ರದ ನೂತನ ಬಜೆಟ್ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.


ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ರೈಲ್ವೆ ಅಭಿವೃದ್ಧಿಯಾಗುತ್ತಿದೆ. ಕರ್ನಾಟಕ ರಾಜ್ಯದ ಪ್ರತಿ ರೈಲು ನಿಲ್ದಾಣಗಳನ್ನೂ ಮೇಲ್ದರ್ಜೆಗೇರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ ರೈಲ್ವೆ ಫ್ಯಾಕ್ಟರಿ ಹಾಗೂ ಅವುಗಳಿಂದಾಗುವ ಉದ್ಯೋಗ ಸೃಷ್ಟಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ ಎಂದು ರೈಲ್ವೆ ಸಚಿವರು ವಿವರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯಾ, ಸಂಸದರಾದ ಪಿ.ಸಿ. ಮೋಹನ್, ಡಾ. ಸಿ.ಎನ್. ಮಂಜುನಾಥ್
ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿನಿ ಸೂರ್ಯ ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು