2:00 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಇಂಡಿಯನ್ ರೆಡ್ ಕ್ರಾಸ್ ಘಟಕದ ವತಿಯಿಂದ ಕೊಲ್ಲಮೊಗರು ವಿಕಲಚೇತನರಿಗೆ ಗಾಲಿ ಖುರ್ಚಿ ವಿತರಣೆ: ಎ.ಜೆ.ವೈದ್ಯಕೀಯ ಸಂಸ್ಥೆಗಳಿಂದ ಆರೋಗ್ಯ ತಪಾಸಣಾ ಶಿಬಿರ

14/02/2024, 21:44

ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ (ರಿ) ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್, ಹರಿಹರ ಗ್ರಾಮ ಪಂಚಾಯತ್, ಕೊಲ್ಲಮೊಗರು ಗ್ರಾಮ ಪಂಚಾಯತ್, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಫೆ.10ರಂದು ಕೊಲ್ಲಮೊಗರು ಸರಕಾರಿ ಶಾಲೆ ಬಂಗ್ಲೆಗುಡ್ಡೆಯಲ್ಲಿ ನಡೆದ 5ನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ದಲ್ಲಿ ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಎರಡು ಗಾಲಿ ಖುರ್ಚಿ ಗಳನ್ನು ಕೊಲ್ಲಮೊಗರು ಗ್ರಾಮದ ಹರಿಶ್ಚಂದ್ರ ಜಾಲು ಮನೆ ಹಾಗೂ ಕಲ್ಮಕಾರ್ ಗ್ರಾಮದ ರುಕ್ಮಯ ಕಲ್ಮಕಾರ್ ಅವರಿಗೆ ವಿತರಿಸಿದರು.
ಎ.ಜೆ.ಆಸ್ಪತ್ರೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಕೇಂದ್ರ ದ ವೈದ್ಯರ ತಂಡದ ಮೂಲಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ , ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ತಹಶೀಲ್ದಾರ್ ಮಂಜುನಾಥ್, ಡಿಎಪ್ಒ ಆಂಟೋನಿ ಮರಿಯಪ್ಪ, ಕೊಲ್ಲಮೊಗ್ರು ಗ್ರಾ.ಪಂ‌. ಅಧ್ಯಕ್ಷೆ ಜಯಶ್ರೀ ಚಾಂತಾಳ, ಹರಿಹರ ಗ್ರಾ.ಪಂ. ಅಧ್ಯಕ್ಷ ವಿಜಯ ಅಂಙಣ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.
“ಪತ್ರಕರ್ತರ ಗ್ರಾಮ ವಾಸ್ತವ್ಯ ಒಂದು ಮಾದರಿ ಕಾರ್ಯಕ್ರಮ. ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ವಿಕಲಚೇತನರನ್ನು ಗುರುತಿಸಿ ಅವರಿಗೆ ಇಂಡಿಯನ್ ರೆಡ್ ಕ್ರಾಸ್ ವತಿಯಿಂದ ಗಾಲಿ ಖುರ್ಚಿ ಯನ್ನು ಅರ್ಹರಿಗೆ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮೂಲಕ ಅವಕಾಶವಾಗಿದೆ “ಎಂದು ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಶಾಂತರಾಮ ಶೆಟ್ಟಿ ಸಿ.ಎ. ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು