3:22 AM Sunday1 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ…

ಇತ್ತೀಚಿನ ಸುದ್ದಿ

ಇಂಡಿಗೋ- ಬಿಎಐಎಲ್ ಮಹತ್ವದ ಒಪ್ಪಂದ; ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶ್ವಮಟ್ಟದ ಎಂಆರ್‌ಒ ಸೌಲಭ್ಯ

30/05/2025, 18:07

ಬೆಂಗಳೂರು(reporterkarnataka.com): ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್)‌ ಜೊತೆಗೆ ಭಾರತದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಮಹತ್ವದ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದೆ.

ಈ ಒಪ್ಪಂದದ ಪ್ರಕಾರ, ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗಾಗಿ (ಎಂಆರ್‌ಒ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಆವರಣದಲ್ಲಿ ಸುಮಾರು 31 ಎಕರೆ ಭೂಮಿ ಇಂಡಿಗೋ ವಿಮಾನಯಾನ ಸಂಸ್ಥೆಗೆ ನಿಯೋಜನೆಯಾಗಲಿದೆ. ಕಿರಿದಾದ ಮತ್ತು ವಿಶಾಲವಾದ, ಎರಡೂ ಬಗೆಯ ವಿಮಾನಗಳನ್ನು ನಿಭಾಯಿಸಬಲ್ಲ ಅತ್ಯಾಧುನಿಕ ಸೌಲಭ್ಯವನ್ನು ಸೃಷ್ಟಿಸುವ ಈ ಯೋಜನೆಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಇಂಡಿಗೋದ ನಿರ್ವಹಣಾ ಸಾಮರ್ಥ್ಯ ಮತ್ತು ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲಿದೆ.
ಈ ಕುರಿತು ಪ್ರತಿಕ್ರಿಯಿಸಿದ ಇಂಡಿಗೋ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಪೀಟರ್ ಎಲ್ಬರ್ಸ್, “ಬೆಂಗಳೂರಿನ ವಾಯುಯಾನ ಪರಿಸರ ವ್ಯವಸ್ಥೆಯ ದೀರ್ಘಕಾಲೀನ ಬೆಳವಣಿಗೆ ಹಾಗೂ ಸ್ಥಾನಮಾನವನ್ನು ಹೆಚ್ಚಿಸಲು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದೊಂದಿಗಿನ ನಮ್ಮ ಸಹಭಾಗಿತ್ವ ಹೆಚ್ಚು ಪುಷ್ಠಿ ನೀಡಲಿದೆ. ಭಾರತದ ಅತ್ಯುತ್ತಮ ಮತ್ತು ವಿಶ್ವ ದರ್ಜೆಯ ಅಂತಾರಾಷ್ಟ್ರೀಯ ಕೇಂದ್ರವಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಜೊತೆಗಿನ ಈ ಸಹಭಾಗಿತ್ವದ ಮೂಲಕ, ಜಾಗತಿಕ ಸಂಪರ್ಕವನ್ನು ಕೇಂದ್ರೀಕರಿಸಿ ಭಾರತೀಯ ವಾಯುಯಾನದ ಭವಿಷ್ಯವನ್ನು ರೂಪಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಈ ಸಹಯೋಗವು ಇಂಡಿಗೋ ಮತ್ತು ಭಾರತದ ಜಾಗತಿಕ ಉಪಸ್ಥಿತಿಯ ಮಹತ್ವವನ್ನು ಬೆಳೆಸುವ ಪ್ರಮುಖ ಹೆಜ್ಜೆಯಾಗಲಿದೆ” ಎಂದು ತಿಳಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಎಂಡಿ ಮತ್ತು ಸಿಇಒ (ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ) ಶ್ರೀ ಹರಿ ಮರಾರ್ ಅವರು ಮಾತನಾಡಿ, “ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಇತ್ತೀಚಿನ ಆಧುನಿಕ ಸೌಲಭ್ಯವನ್ನು ಸ್ಥಾಪಿಸಲು ಮತ್ತು ಕಾರ್ಯಾಚರಣೆಯನ್ನು ಹೆಚ್ಚಿಸಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರನ್ನು ಆಯ್ಕೆ ಮಾಡಿರುವುದು ಸಂತೋಷವೆನಿಸುತ್ತದೆ. ಬಹಳ ಹಿಂದಿನಿಂದಲೂ ಇಂಡಿಗೋ ಜೊತೆಗೆ ಅತ್ಯಂತ ಯಶಸ್ವಿ, ದೀರ್ಘಕಾಲೀನ ಸಂಬಂಧವನ್ನು ನಾವು ಹೊಂದಿದ್ದೇವೆ. ಈ ಹೊಸ ಸಹಯೋಗವು ಇಂಡಿಗೋ ವಿಮಾನಯಾನ ಸಂಸ್ಥೆಯೊಂದಿಗಿನ ನಮ್ಮ ಒಡನಾಟವನ್ನು ಇನ್ನಷ್ಟು ಬಲಪಡಿಸಲಿದೆ. ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಮತ್ತು ಬೆಂಗಳೂರು ನಗರದ ಬೆಳವಣಿಗೆಗೆ ಸಾಕ್ಷಿಯಾಗಲಿದೆ. ಈ ಒಪ್ಪಂದವು ವಿಶ್ವ ದರ್ಜೆಯ ವಾಯುಯಾನ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಮ್ಮ ಬದ್ಧತೆಯನ್ನು ಬಲಪಡಿಸುತ್ತದೆ. ಭಾರತದ ಪ್ರಧಾನ ಏರೋಸ್ಪೇಸ್ ಮತ್ತು ಎಂಆರ್‌ಒ ಹಬ್ ಆಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಪಾತ್ರವನ್ನು ಮತ್ತಷ್ಟು ಹೆಚ್ಚಿಸಲಿದೆ. ಈ ಸಹಯೋಗವನ್ನು ಸಾಧ್ಯವಾಗಿಸುವಲ್ಲಿ ಮತ್ತು ಮುಂದಿನ ಹಂತದ ಬೆಳವಣಿಗೆಗೆ ಅನುವು ಮಾಡಿಕೊಡುವಲ್ಲಿ ಕರ್ನಾಟಕ ಸರ್ಕಾರ ಒದಗಿಸಿದ ನಿರಂತರ ಬೆಂಬಲಕ್ಕಾಗಿ ಕೃತಜ್ಞತೆ ಸಲ್ಲಿಸುವೆ” ಎಂದು ತಿಳಿಸಿದರು.
ಸಂಪರ್ಕ ಜಾಲದ ವಿಸ್ತರಣೆ, ಮೂಲಸೌಕರ್ಯ ಅಭಿವೃದ್ಧಿ, ಮತ್ತು ಜಂಟಿ ಪ್ರಚಾರ ಉಪಕ್ರಮಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವಿಶಾಲವಾದ ಸಹಯೋಗವನ್ನು ಈ ಒಪ್ಪಂದವು ಒಳಗೊಂಡಿದೆ. ಈ ಒಪ್ಪಂದು ವಾಯುಯಾನ ಮೂಲಸೌಕರ್ಯವನ್ನು ಹೆಚ್ಚಿಸಲು, ಪ್ರಯಾಣಿಕ ಮತ್ತು ವಾಯು ಸರಕು ಸಾಗಣೆಗಳಿಗಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಾಚರಣೆಗಳ ಪ್ರಮುಖ ಕೇಂದ್ರವನ್ನಾಗಿ ಬೆಂಗಳೂರಿನ ಸ್ಥಾನವನ್ನು ವರ್ಧಿಸಲು ಎರಡೂ ಸಂಸ್ಥೆಗಳ ಕಾರ್ಯತಂತ್ರದ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ.
ಈ ಎಂಆರ್‌ಒ ಸೌಲಭ್ಯವು, ಸೇವೆಗೆ ಸಜ್ಜುಗೊಂಡ 400 ಕ್ಕೂ ಹೆಚ್ಚು ವಿಮಾನಗಳ ಮೂಲಕ ವಿಮಾನ ಲಭ್ಯತೆ ಮತ್ತು ನಿರ್ವಹಣೆಯ ಖರ್ಚುವೆಚ್ಚದಲ್ಲಿನ ದಕ್ಷತೆಯ ಹೆಚ್ಚಳದಂತಹ ಹಲವು ಗಮನಾರ್ಹ ಪ್ರಯೋಜನವನ್ನು ಒದಗಿಸುತ್ತದೆ. ಇದಲ್ಲದೆ, ಎಂಆರ್‌ಒ ಸೌಲಭ್ಯದ ಅಭಿವೃದ್ಧಿಯು ಕರ್ನಾಟಕದ ಏರೋಸ್ಪೇಸ್ ಮತ್ತು ರಕ್ಷಣಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇಂಡಿಗೋ ಈಗಾಗಲೇ ದೆಹಲಿ ಮತ್ತು ಬೆಂಗಳೂರಿನಲ್ಲಿ ತಲಾ ಒಂದು ಎಂಆರ್‌ಒ ಸೌಲಭ್ಯವನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು