1:44 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಇಂದ್ರಾಳಿಯಿಂದ ಪರಪ್ಪನ ಅಗ್ರಹಾರಕ್ಕೆ: ಚೂರು ಪಾರು  ಮೂಳೆ ಆ ಪಾಪಿಗಳನ್ನು ಕಂಬಿ ಎಣಿಸುವಂತೆ ಮಾಡಿತು! 

13/06/2021, 08:15

ಉಡುಪಿ(reporterkarnataka news): ಸುಟ್ಟು ಕರಕಲಾದ ಆ ದೇಹದ ಚೂರುಪಾರು ಮೂಳೆ ಸಿಗದಿದ್ದರೆ ಆ ಪಾಪಿಗಳು ಇಷ್ಟು ಹೊತ್ತಿನಲ್ಲಿ ಆರಾಮವಾಗಿ ಸುಖದ ಸುಪತ್ತಿನಲ್ಲಿ ತೇಲಾಡುತ್ತಿದ್ದರೋ ಏನೋ. ಆದರೆ ‘ತಾನೊಂದು ಬಗೆದರೆ ದೈವ ಇನ್ನೊಂದು ಬಗೆಯುತ್ತದೆ’  ಎನ್ನುವಂತೆ ಅವರ ಇಡೀ ಪ್ಲಾನನ್ನೇ ಅಳಿದುಳಿದ ಆ ಮೂಳೆ ಚೂರು ತಲೆಕೆಳಗೆ ಮಾಡಿ ಬಿಟ್ಟಿತು.

ಇದು ಉದ್ಯಮಿ ಭಾಸ್ಕರ ಶೆಟ್ಟಿ ಅವರ ಕೊಲೆ ಪ್ರಕರಣದ ಕಥೆ. ಗಂಡ-ಹೆಂಡತಿ ಸಂಬಂಧವನ್ನೇ ಅನುಮಾನದಿಂದ ನೋಡುವಂತೆ, ಅಪ್ಪ-ಮಗನ ಸಂಬಂಧಕ್ಕೆ ಕಪ್ಪು ಚುಕ್ಕೆ ಎಳೆಯುವಂತೆ ಮಾಡಿದ ಅಮಾನುಷ ಕೊಲೆ ಇದು. 

*ಏನಿದು ಪ್ರಕರಣ?:*  300 ಕೋಟಿ ರೂ. ಆಸ್ತಿಯ ಒಡೆಯನಾದ ಭಾಸ್ಕರ ಶೆಟ್ಟಿ ಅವರು 2016 ಜುಲೈ ತಿಂಗಳಿನಲ್ಲಿ ಇದ್ದಕ್ಕಿದ್ದ ಹಾಗೆ ಕಾಣೆಯಾಗುತ್ತಾರೆ. ಭಾಸ್ಕರ ಶೆಟ್ಟಿ ಅವರ ತಾಯಿ ಗುಲಾಬಿ ಶೆಡ್ತಿ ಅವರು ಮಗ ನಾಪತ್ತೆಯಾದ ಕುರಿತು ಮಣಿಪಾಲ ಪೊಲೀಸರಿಗೆ ದೂರು ನೀಡುತ್ತಾರೆ. ತನಿಖೆಯ ಆರಂಭದಲ್ಲೇ ಪೊಲೀಸರಿಗೆ ಕೊಲೆಯ ವಾಸನೆ ಮೂಗಿಗೆ ಬಡಿಯಲಾರಂಭಿಸುತ್ತದೆ. ತಮಗೆ ದೊರೆತ ಮೂಳೆ ಚೂರನ್ನು ಡಿಎನ್ ಎ ಪರೀಕ್ಷೆಗೆ ಕಳುಹಿಸಿದಾಗ ಅದರ ಡಿಎನ್ ಎ ಮತ್ತು ಭಾಸ್ಕರ ಶೆಟ್ಟಿ ಅವರ ತಾಯಿ ಗುಲಾಬಿ ಶೆಡ್ತಿ ಹಾಗೂ ಸಹೋದರರ ಡಿಎನ್ ಎಗೆ ಹೋಲಿಕೆಯಾಗಿತ್ತು. ಇದರಿಂದ ಮೂಳೆ ಭಾಸ್ಕರ ಶೆಟ್ಟಿ ಅವರದ್ದು ಎನ್ನುವುದು ರುಜುವಾಯಿತು. ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ, ಪುತ್ರ ನವನೀತ ಹಾಗೂ ಜ್ಯೋತಿಷಿ ನಿರಂಜನ್ ಅವರ ಬಂಧನವಾಗುತ್ತದೆ.

ಸುಮಾರು 5 ವರ್ಷ ಕಾಲ ನಡೆದ ಕಾನೂನು ಸಮರದಲ್ಲಿ ರಾಜೇಶ್ವರಿ, ನವನೀತ ಹಾಗೂ ನಿರಂಜನ್ ಅವರ ಮೇಲಿನ ಆರೋಪ ಸಾಬೀತಾಗಿ ಪರಪ್ಪನ ಅಗ್ರಹಾರ ಸೇರುತ್ತಾರೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೂ ಜೀವಿತಾವಧಿ ಶಿಕ್ಷೆಯಾಗುತ್ತದೆ.

*ಕೊಲೆ ಬಗ್ಗೆ ಮೊದಲೇ ತಿಳಿದಿತ್ತೇ?:*  ಭಾಸ್ಕರ ಶೆಟ್ಟಿ ಅವರಿಗೆ ತನ್ನ ಕೊಲೆ ನಡೆಯುತ್ತದೆ ಎಂಬ ಮುನ್ಸೂಚನೆ ಮೊದಲೇ ಸಿಕ್ಕಿತೇ? ಹೌದೆನ್ನುತ್ತದೆ ಇಡೀ ಪ್ರಕರಣ. ಈ ಹಿಂದೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ಸೇರಿ ಹಲ್ಲೆ ನಡೆಸಿದ್ದರು. ಇದರ ಬಳಿಕ, ಕೊಲೆಯಾಗುವ ಎರಡು ವಾರಗಳಷ್ಟೇ ಮುನ್ನ ಭಾಸ್ಕರ ಶೆಟ್ಟಿ ಅವರು ತನ್ನ ಆಸ್ತಿಯ ವಿಲ್ ಬರೆದಿದ್ದರು. ಆ ವಿಲ್ ನಲ್ಲಿ ತನ್ನ ಸಕಲ ಆಸ್ತಿಯನ್ನು ತಾಯಿ ಗುಲಾಬಿ ಶೆಡ್ತಿ ಹೆಸರಿಗೆ ಬರೆದಿದ್ದಾರೆ. ತಾಯಿ ಗತಿಸಿದ ಬಳಿಕ ಆಸ್ತಿ ಇಬ್ಬರು ಸಹೋದರರಿಗೆ ಹಾಗೂ ಶೇ. 10ರಷ್ಟು ಸಹೋದರಿಯರಿಗೆ ಕೊಡಬೇಕೆಂದು ಸೂಚಿಸಿದ್ದಾರೆ.

*ಎಷ್ಟಿದೆ ಆಸ್ತಿ?: * ಭಾಸ್ಕರ್ ಶೆಟ್ಟಿ ಅವರ ಹೆಸರಿನಲ್ಲಿ ಉಡುಪಿ ಶಿರಿಬೀಡುವಿನಲ್ಲಿರುವ ಸರ್ವೇ ನಂಬ್ರ 114ರಲ್ಲಿರುವ ಒಟ್ಟು 26 ಸೆಂಟ್ಸ್‌ ಸ್ಥಿರಾಸ್ತಿ ಹಾಗೂ ಅದರಲ್ಲಿರುವ ಶ್ರೀದುರ್ಗಾ ಇಂಟರ್‌ನ್ಯಾಶನಲ್‌ ಹೊಟೇಲ್‌ ಕಟ್ಟಡ ಮತ್ತು ಅದರಲ್ಲಿ ಇರುವ ಬಾಡಿಗೆ ಅಂಗಡಿ ಕೋಣೆಗಳಿವೆ. ಉಡುಪಿಯ ಮಸೀದಿ ರಸ್ತೆಯಲ್ಲಿರುವ ಸರ್ವೇ ನಂಬರ್‌ 120/14ರಲ್ಲಿನ 26 ಸೆಂಟ್ಸ್‌ ಜಾಗದಲ್ಲಿರುವ ಶಂಕರ್‌ ಬಿಲ್ಡಿಂಗ್‌ ಹೆಸರಿನ ವಾಣಿಜ್ಯ ಕಟ್ಟಡ, ಅದರಲ್ಲಿರುವ ಅಂಗಡಿ ಕೋಣೆಗಳು. ನಗರದ ಬಾಳಿಗಾ ಟವರ್‌ನಲ್ಲಿರುವ ಸುಮಾರು 210 ಅಡಿ ವಿಸ್ತ್ರೀರ್ಣದ ವಾಣಿಜ್ಯ ಅಂಗಡಿ ಕೋಣೆ, ಶಿವಳ್ಳಿ ಗ್ರಾಮದ ಇಂದ್ರಾಳಿಯಲ್ಲಿರುವ 4,500 ಚದರಡಿ ವಿಸ್ತ್ರೀರ್ಣದ ಈಶ್ವರಿ ಹೆಸರಿನ ವಾಸದ ಮನೆ ಇದೆ. ಹಾಗೆ ವಿದೇಶದಲ್ಲಿ 6 ಸೂಪರ್ ಮಾರ್ಕೆಟ್ ಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು