9:07 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!!

25/10/2021, 22:17

ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು.

ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸಭೆಯ ಸಂದರ್ಭಗಳಲ್ಲಿ ಸದಸ್ಯರಿಗೆ ನೀಡುವ ಉಪಹಾರದ ಗುಣಮಟ್ಟ ಚೆನ್ನಾಗಿ ಇಲ್ಲ. ಇಂತಹ ಉಪಹಾರವನ್ನ ನಮಗೆ ನೀಡಿ ಹೆಚ್ಚಿನ ಹಣವನ್ನು ಹೋಟೆಲ್ ಗಳಿಗೆ ಪಾವತಿಸುತ್ತೀರ ಎಂದು ವ್ಯಂಗ್ಯ ವಾಗಿ ಸಭೆಯಲ್ಲಿ ಸದಸ್ಯರನ್ನು ನಗಿಸಿದ್ದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರೊಬ್ಬರು ಉಪಹಾರ, ಊಟ ಮುಂದಿನ ಸಭೆಗೆ ಇಂದಿರಾ ಕ್ಯಾಂಟೀನ್ ನಿಂದ ತರಿಸುವ ಎಂದು ಪ್ರತ್ಯುತ್ರರ ನೀಡಿದರು. ಅದನ್ನೇ ಮುಖ್ಯ ವಿಷಯವಾಗಿ ತೆಗೆದುಕೊಂಡು ಸದಸ್ಯರು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ನಿಂದಲೇ ಊಟದ ವ್ಯವಸ್ಥೆ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದರೆ ಪಾರ್ಸೆಲ್ ವ್ಯವಸ್ಥೆ ಇಲ್ಲದ ಕಾರಣ ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಗೆ ತೆರಳಿ ಮಧ್ಯಾಹ್ನದ ಭೋಜನದ ರುಚಿ ಸವಿದರು.  ಇಂದಿರಾ ಕ್ಯಾಂಟೀನ್ನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು