10:54 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ ಆದೇಶ; ಉಪ ನೊಂದಣಾಧಿಕಾರಿ ಅಮಾನತು

06/01/2026, 19:26

ಬೆಂಗಳೂರು(reporterkarnataka.com): ಆನೇಕಲ್ ಅತ್ತಿಬೆಲೆಯಲ್ಲಿ ಇನ್ಫೋಸಿಸ್ ನಿಂದ 53.5 ಎಕರೆ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸರಕಾರ ಆದೇಶ ಮಾಡಿದೆ.
ಬೆಂಗಳೂರು ಜಿಲ್ಲಾಧಿಕಾರಿ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರೆಂದು ಗೊತ್ತಾದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೈಗೌಡ ಎಚ್ಚರಿಸಿದ್ದಾರೆ.

*ಏನಿದು ಪ್ರಕರಣ:?*
ಇನ್ಫೋಸಿಸ್ ಸಂಸ್ಥೆ ಅನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ತಾನು ಹೊಂದಿರುವ 53.5 ಎಕರೆ ಪ್ರದೇಶದ ಜಾಗವನ್ನು 250 ಕೊಟಿ ರೂ.ಗೆ ಪೂರ್ವಂಕರ ಕಂಪನಿಗೆ ಮಾರಾಟ ಮಾಡಿದೆ ಎಂದು ಆರೋಪಿಸಲಾಗಿದೆ. ತನ್ನ ಆಸ್ತಿಪಾಸ್ತಿಗಳ ಮರುವಿಂಗಡಣೆಯ ಭಾಗವಾಗಿ ಈ ಆಸ್ತಿಯನ್ನು ಮಾರಲಾಗಿದೆ ಎಂಬುದು ಇನ್ಫೋಸಿಸ್ ಹೇಳಿಕೆ ನೀಡಿದೆ.
ಜಮೀನು ಮಾರಾಟದಲ್ಲಿ ಯಾವುದೇ ಕಾನೂನು ಉಲ್ಲಂಘನೆ ಮಾಡಲಾಗಿಲ್ಲ. ಎಲ್ಲಾ ನಿಯಮಗಳನ್ನು ಪಾಲಿಸಲಾಗಿದೆ. ಜೊತೆಗೆ, ಈ ಭೂಮಿ ಸರ್ಕಾರ ಎಲೋಟ್ ಮಾಡಿದ್ದಲ್ಲ. ಮಾರುಕಟ್ಟೆ ಮೌಲ್ಯಕ್ಕೆ ಖರೀದಿ ಮಾಡಿದ್ದಿದು ಎಂದು ಇನ್ಫೋಸಿಸ್ ಹೇಳಿಕೆ ಕೊಟ್ಟಿದೆ.

*ಉಪನೊಂದಣಾಧಿಕಾರಿ ಅಮಾನತು:*
ಇನ್ಫೋಸಿಸ್ ಭೂಮಿ ಮಾರಾಟ ನೆರವೇರಿಸಿದ ಸರ್ಜಾಪುರ ಉಪನೊಂದಣಾಧಿಕಾರಿ ರವಿ ಸಂಕನಗೌಡ ಅವರನ್ನು ಇಲಾಖೆ ಅಮಾನತು ಮಾಡಿದೆ. ಅಕ್ರಮ ರಿಜಿಸ್ಟ್ರೇಶನ್ ಮೂಲಕ 40 ಸೇಲ್ ಡೀಡ್ ಗ
ಳನ್ನು ನೊಂದಾಯಿಸಲಾಗಿದೆ ಎನ್ನುವುದು ಆರೋಪ.
ಕಾವೇರಿ 2.0 ಸಾಫ್ಟ್ ವೇರ್ ದುರುಪಯೋಗದ ಆರೋಪ
ಸೇಲ್ ಡೀಡ್ ಗಳನ್ನು ನೊಂದಾಯಿಸುವ ಕಾವೇರಿ 2.0 ರಿಜಿಸ್ಟ್ರೇಶನ್ ಸಾಫ್ಟ್ ವೇರ್ ನಲ್ಲಿ ಕೋರ್ಟ್ ಆದೇಶವಿರುವ ಪ್ರಕರಣಗಳಲ್ಲಿ ಸೇಲ್ ಡೀಡ್ ಗಳ ರಿಜಿಸ್ಟ್ರೇಶನ್ ಗಳಿಗೆ ವಿನಾಯಿತಿ ಕೊಡುವ ಅವಕಾಶ ಇದೆ. ಇದನ್ನು ದುರುಪಯೋಗಿಸಿಕೊಳ್ಳಲಾಗಿದೆ. ಕೋರ್ಟ್ ಆದೇಶ ಇಲ್ಲದಿದ್ದರೂ, ಕೋರ್ಟ್ ಆರ್ಡರ್ ಆಪ್ಷನ್ ಆಯ್ಕೆ ಮಾಡಿಕೊಂಡು ಸೇಲ್ ಡೀಡ್ ಗಳನ್ನು ನೊಂದಾಯಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ಫೋಸಿಸ್ ನಲ್ಲಿ ಜಮೀನು ಮಾರಾಟ ಮಾತ್ರವಲ್ಲ, ಇನ್ನೂ ಅನೇಕ ಪ್ರಕರಣಗಳು ಇದೇ ರೀತಿ ಆಗಿದೆ. ಹೀಗಾಗಿ ಉಪನೊಂದಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಸರ್ಜಾರಪುರ ಮಾತ್ರವಲ್ಲ, ಬಾನಸವಾಡಿ, ವರ್ತೂರು ಮತ್ತು ಹಲಸರೂರು ಉಪನೊಂದಣಿ ಕಚೇರಿಗಳಲ್ಲೂ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಐವರು ಅಧಿಕಾರಿಗಳನ್ನು ಇತ್ತೀಚೆಗೆ ಅಮಾನತುಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು