10:57 PM Monday25 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಡ್ರೈವರ್ ಜತೆ ಲವ್: ಮಗಳಿಗೆ ಆಯ್ಕೆಯ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್‌

15/06/2022, 09:44

ಮುಂಬೈ(reporterkarnataka.com): ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ.

ಡ್ರೈವರ್ ಜೊತೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಪುತ್ರಿಗಾಗಿ ತಂದೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದರು.

ಈ ಬಗ್ಗೆ ಹೈಕೋರ್ಟ್‌ ಚರ್ಚೆ ವಿಚಾರಣೆ ನಡೆಸಿ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ತಂದೆ-ತಾಯಿಯರಿದ್ದಾರೆ. ತಂದೆ-ತಾಯಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ಮಕ್ಕಳಿದ್ದಾರೆ. ಪರಸ್ಪರ ಪ್ರೀತಿಯಿದ್ದರೆ ಇಂತಹ ಸ್ಥಿತಿ ಉದ್ಭವಿಸುವುದಿಲ್ಲ. ತಂದೆ ತಾಯಿಗಿಂತ ದೇವರಿಲ್ಲ, ಅವರ ಋಣ ತೀರಿಸಲಾಗಲ್ಲ ಎಂದು ಮನುಸ್ಮೃತಿಯಲ್ಲಿನ ವಾಕ್ಯವನ್ನು ಉಲ್ಲೇಖಿಸಿದೆ.

ಪ್ರೇಮ ಕುರುಡಾಗಿರುವುದರಿಂದ ಪೋಷಕರ ಪ್ರೀತಿ ಕಾಣುವುದಿಲ್ಲ. ಇಂದು ಹೆತ್ತವರಿಗೆ ಮಾಡಿದ್ದೇ ನಾಳೆ ಮಕ್ಕಳಿಗೂ ಆಗಬಹುದು ಎಂದು ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರ ಪೀಠ ಅಭಿಪ್ರಾಯ ಪಟ್ಟಿದೆ.

ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ.

ಇತ್ತ ಪೋಷಕರೊಂದಿಗೆ ತೆರಳಲು 19 ವರ್ಷದ ಮಗಳು ನಕಾರ ಮಾಡಿದ್ದು ವಯಸ್ಕಳಾಗಿರುವುದರಿಂದ ಪ್ರೀತಿಸಿ ವಿವಾಹವಾಗಿರುವುದಾಗಿ ಹೇಳಿದ್ದಾಳೆ. ಹಾಗೂ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುವುದಾಗಿ ಪ್ರಿಯಕರ ಕೂಡ ಕೋರ್ಟ್‌ಗೆ ಭರವಸೆ ನೀಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು