5:40 PM Wednesday22 - October 2025
ಬ್ರೇಕಿಂಗ್ ನ್ಯೂಸ್
ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

ಇತ್ತೀಚಿನ ಸುದ್ದಿ

ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಡ್ರೈವರ್ ಜತೆ ಲವ್: ಮಗಳಿಗೆ ಆಯ್ಕೆಯ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್‌

15/06/2022, 09:44

ಮುಂಬೈ(reporterkarnataka.com): ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ.

ಡ್ರೈವರ್ ಜೊತೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಪುತ್ರಿಗಾಗಿ ತಂದೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದರು.

ಈ ಬಗ್ಗೆ ಹೈಕೋರ್ಟ್‌ ಚರ್ಚೆ ವಿಚಾರಣೆ ನಡೆಸಿ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ತಂದೆ-ತಾಯಿಯರಿದ್ದಾರೆ. ತಂದೆ-ತಾಯಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ಮಕ್ಕಳಿದ್ದಾರೆ. ಪರಸ್ಪರ ಪ್ರೀತಿಯಿದ್ದರೆ ಇಂತಹ ಸ್ಥಿತಿ ಉದ್ಭವಿಸುವುದಿಲ್ಲ. ತಂದೆ ತಾಯಿಗಿಂತ ದೇವರಿಲ್ಲ, ಅವರ ಋಣ ತೀರಿಸಲಾಗಲ್ಲ ಎಂದು ಮನುಸ್ಮೃತಿಯಲ್ಲಿನ ವಾಕ್ಯವನ್ನು ಉಲ್ಲೇಖಿಸಿದೆ.

ಪ್ರೇಮ ಕುರುಡಾಗಿರುವುದರಿಂದ ಪೋಷಕರ ಪ್ರೀತಿ ಕಾಣುವುದಿಲ್ಲ. ಇಂದು ಹೆತ್ತವರಿಗೆ ಮಾಡಿದ್ದೇ ನಾಳೆ ಮಕ್ಕಳಿಗೂ ಆಗಬಹುದು ಎಂದು ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರ ಪೀಠ ಅಭಿಪ್ರಾಯ ಪಟ್ಟಿದೆ.

ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ.

ಇತ್ತ ಪೋಷಕರೊಂದಿಗೆ ತೆರಳಲು 19 ವರ್ಷದ ಮಗಳು ನಕಾರ ಮಾಡಿದ್ದು ವಯಸ್ಕಳಾಗಿರುವುದರಿಂದ ಪ್ರೀತಿಸಿ ವಿವಾಹವಾಗಿರುವುದಾಗಿ ಹೇಳಿದ್ದಾಳೆ. ಹಾಗೂ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುವುದಾಗಿ ಪ್ರಿಯಕರ ಕೂಡ ಕೋರ್ಟ್‌ಗೆ ಭರವಸೆ ನೀಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು