11:08 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ವಿರಾಜಪೇಟೆ ಚನ್ನoಗೊಲ್ಲಿ ಸಮೀಪ ಇನೋವಾ ಕಾರು ಮರಕ್ಕೆ ಡಿಕ್ಕಿ: ಓರ್ವ ಸಾವು; ಇಬ್ಬರು ಗಂಭೀರ

11/10/2025, 11:18

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರುನಿಂದ ವಿರಾಜಪೇಟೆಗೆ ಆಗಮಿಸುತ್ತಿದ್ದ ಇನೋವಾ ಕಾರೊಂದು ಚನ್ನoಗೊಲ್ಲಿ ಬಳಿ ಅಪಘಾತಕ್ಕೀಡಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.ಇನೋವಾ ಕಾರಿನ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ರಾಜ್ಯ ಹೆದ್ದಾರಿ ತಿತಿಮತಿ – ಗೋಣಿಕೊಪ್ಪ ಮುಖ್ಯ ರಸ್ತೆಯ ಚೆನ್ನಂಗೊಲ್ಲಿಯಲ್ಲಿ ಈ ಘಟನೆ ನಡೆದಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ 6 ಜನರಲ್ಲಿ ಒಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ರಮಾನಿಸಲಾಗಿದೆ.

ಕಾರಿನಲ್ಲಿದ್ದ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದ ವ್ಯಕ್ತಿಯೊಬ್ಬರು ಅಪಘಾತ ಸಂಭವಿಸಿದಾಗ ಸುತ್ತ ಸೇರಿದ ಮಂದಿ ಅಪಘಾತಕ್ಕೆ ಈಡಾದವರನ್ನು ರಕ್ಷಿಸುವ ಬದಲು ವಿಡಿಯೋ ಮಾಡುತ್ತಾ ತಲ್ಲೀನರಾದ ಘಟನೆಯ ಕುರಿತು ಮಾತನಾಡಿ, ಹಲವರಿಗೆ ಮಾನವೀಯತೆ ಪಾಠವನ್ನು ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು