3:04 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಇನ್ನು 3 ವರ್ಷದ ಪುಟಾಣಿಗೂ ಅರ್ಧ ದರ: ಮಕ್ಕಳ ಎತ್ತರ ನೋಡಿ ಕೆಸ್ಸಾರ್ಟಿಸಿ ಟಿಕೆಟ್ !!

15/05/2022, 11:42

ಬೆಂಗಳೂರು(reporterkarnataka.com): ಮಕ್ಕಳ ವಯಸ್ಸಿನ ಬದಲು ಎತ್ತರವನ್ನು ಆಧರಿಸಿ ಟಿಕೆಟ್ ಪಡೆದು ಪ್ರಯಾಣಿಸಬೇಕೆಂಬ ಹೊಸ ನಿಯಮವನ್ನು  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಜಾರಿಗೆ ತಂದಿದೆ.

6 ವರ್ಷ ಮೇಲ್ಪಟ್ಟಿದ್ದರೆ ಮಾತ್ರವಲ್ಲ,  ಈಗ ಮೂರು ವರ್ಷದ ಪುಟಾಣಿಗೂ ಅರ್ಧ ಟಿಕೆಟ್ ನೀಡಲಾಗುತ್ತಿದೆ. ಈ ಹಿಂದೆ ಬಸ್ ಗಳಲ್ಲಿ ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣದ ವ್ಯವಸ್ಥೆಯಿತ್ತು. 6-12 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಅರ್ಧ ಟಿಕೆಟ್ ನೀಡಲಾಗುತ್ತಿತ್ತು. ಆದರೆ ಈಗ ವಯಸ್ಸಿನ  ಬದಲಿಗೆ ಮಗುವಿನ ಎತ್ತರ ಆಧರಿಸಿ ಟಿಕೆಟ್ ನೀಡಲಾಗುತ್ತದೆ. ಮಗು ಮೂರು ಅಡಿ ಎತ್ತರವಿದ್ದು, ವಯಸ್ಸು ಇನ್ನೂ ಎರಡು ಅಥವಾ ಮೂರು ವರ್ಷವೇ ಆಗಿದ್ದರೂ ಅಂತಹ ಪೋಷಕ ಪ್ರಯಾಣಿಕರಿಂದ ಅರ್ಧ ಟಿಕೆಟ್ ನ  ಹಣ ಪಡೆದು ಟಿಕೆಟ್ ಕೊಡಲಾಗುತ್ತಿದೆ.

ಮಕ್ಕಳ ಎತ್ತರ ನೋಡಲು ಬಸ್ ನ ಮಧ್ಯದಲ್ಲಿರುವ ಕಂಬಗಳ ಮೇಲೆ ಎರಡು ಕಡೆ (3 ಅಡಿ, 4 ಅಡಿ) ಬಣ್ಣದಲ್ಲಿ ಗುರುತು ಮಾಡಲಾಗಿದೆ. ಯಾರು ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸುತ್ತಾರೋ ಅಂತಹವರ ಮಕ್ಕಳನ್ನು ಸರಳಿಗೆ ನಿಲ್ಲಿಸಿ, ಎತ್ತರ ನೋಡಿ ಟಿಕೆಟ್ ನೀಡಲಾಗುತ್ತಿದೆ.

ಇದು ಸಾಕಷ್ಟು ಬಡ ಪ್ರಯಾಣಿಕರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಹತ್ತಿರದ ಊರುಗಳಿಗೆ ಪ್ರಯಾಣ ಬೆಳೆಸುವುದಾದರೆ ಪುಟಾಣಿ ಮಕ್ಕಳಿಗೆ ಟಿಕೆಟ್ ತೆಗೆದುಕೊಂಡರೂ ಹೊರೆಯಾಗುವುದಿಲ್ಲ. ಆದರೆ  ದೂರದ ಊರುಗಳಿಗೆ ಅದರಲ್ಲೂ ಸ್ಲೀಪರ್ ಕೋಚ್ಗಳಲ್ಲಿ ಟಿಕೆಟ್ ದರ ದುಪ್ಪಟ್ಟಾಗಿರುತ್ತದೆ. ಇಂತಹ ವೇಳೆ ಮಕ್ಕಳಿಗೆ ಅರ್ಧ ಟಿಕೆಟ್ ತೆಗೆದುಕೊಳ್ಳುವುದು ಹೊರೆಯಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು