1:39 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಇನ್ನು 3 ವರ್ಷದ ಪುಟಾಣಿಗೂ ಅರ್ಧ ದರ: ಮಕ್ಕಳ ಎತ್ತರ ನೋಡಿ ಕೆಸ್ಸಾರ್ಟಿಸಿ ಟಿಕೆಟ್ !!

15/05/2022, 11:42

ಬೆಂಗಳೂರು(reporterkarnataka.com): ಮಕ್ಕಳ ವಯಸ್ಸಿನ ಬದಲು ಎತ್ತರವನ್ನು ಆಧರಿಸಿ ಟಿಕೆಟ್ ಪಡೆದು ಪ್ರಯಾಣಿಸಬೇಕೆಂಬ ಹೊಸ ನಿಯಮವನ್ನು  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಜಾರಿಗೆ ತಂದಿದೆ.

6 ವರ್ಷ ಮೇಲ್ಪಟ್ಟಿದ್ದರೆ ಮಾತ್ರವಲ್ಲ,  ಈಗ ಮೂರು ವರ್ಷದ ಪುಟಾಣಿಗೂ ಅರ್ಧ ಟಿಕೆಟ್ ನೀಡಲಾಗುತ್ತಿದೆ. ಈ ಹಿಂದೆ ಬಸ್ ಗಳಲ್ಲಿ ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣದ ವ್ಯವಸ್ಥೆಯಿತ್ತು. 6-12 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಅರ್ಧ ಟಿಕೆಟ್ ನೀಡಲಾಗುತ್ತಿತ್ತು. ಆದರೆ ಈಗ ವಯಸ್ಸಿನ  ಬದಲಿಗೆ ಮಗುವಿನ ಎತ್ತರ ಆಧರಿಸಿ ಟಿಕೆಟ್ ನೀಡಲಾಗುತ್ತದೆ. ಮಗು ಮೂರು ಅಡಿ ಎತ್ತರವಿದ್ದು, ವಯಸ್ಸು ಇನ್ನೂ ಎರಡು ಅಥವಾ ಮೂರು ವರ್ಷವೇ ಆಗಿದ್ದರೂ ಅಂತಹ ಪೋಷಕ ಪ್ರಯಾಣಿಕರಿಂದ ಅರ್ಧ ಟಿಕೆಟ್ ನ  ಹಣ ಪಡೆದು ಟಿಕೆಟ್ ಕೊಡಲಾಗುತ್ತಿದೆ.

ಮಕ್ಕಳ ಎತ್ತರ ನೋಡಲು ಬಸ್ ನ ಮಧ್ಯದಲ್ಲಿರುವ ಕಂಬಗಳ ಮೇಲೆ ಎರಡು ಕಡೆ (3 ಅಡಿ, 4 ಅಡಿ) ಬಣ್ಣದಲ್ಲಿ ಗುರುತು ಮಾಡಲಾಗಿದೆ. ಯಾರು ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸುತ್ತಾರೋ ಅಂತಹವರ ಮಕ್ಕಳನ್ನು ಸರಳಿಗೆ ನಿಲ್ಲಿಸಿ, ಎತ್ತರ ನೋಡಿ ಟಿಕೆಟ್ ನೀಡಲಾಗುತ್ತಿದೆ.

ಇದು ಸಾಕಷ್ಟು ಬಡ ಪ್ರಯಾಣಿಕರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಹತ್ತಿರದ ಊರುಗಳಿಗೆ ಪ್ರಯಾಣ ಬೆಳೆಸುವುದಾದರೆ ಪುಟಾಣಿ ಮಕ್ಕಳಿಗೆ ಟಿಕೆಟ್ ತೆಗೆದುಕೊಂಡರೂ ಹೊರೆಯಾಗುವುದಿಲ್ಲ. ಆದರೆ  ದೂರದ ಊರುಗಳಿಗೆ ಅದರಲ್ಲೂ ಸ್ಲೀಪರ್ ಕೋಚ್ಗಳಲ್ಲಿ ಟಿಕೆಟ್ ದರ ದುಪ್ಪಟ್ಟಾಗಿರುತ್ತದೆ. ಇಂತಹ ವೇಳೆ ಮಕ್ಕಳಿಗೆ ಅರ್ಧ ಟಿಕೆಟ್ ತೆಗೆದುಕೊಳ್ಳುವುದು ಹೊರೆಯಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು