1:23 AM Thursday28 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಅಶೋಕ ಶಿಲಾಶಾಸನ: ಇಲ್ಲಿಗಾಗಮಿಸಿದ ಪ್ರವಾಸಿಗರಿಗೆ ಸಿಗದು ಗುಟುಕು ಹನಿ ನೀರು!!

08/05/2022, 19:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣಕ್ಕೆ ಇತಿಹಾಸದಲ್ಲಿ ಹೆಸರಿದೆ. ಚುನಾವಣೆ ಸಂದರ್ಭದಲ್ಲಿ ಮಸ್ಕಿ ಹೆಸರು ದೆಹಲಿವರೆಗೆ ಮುಟ್ಟಿದೆ. ಪ್ರವಾಸೋದ್ಯಮ ಸಚಿವರೇ ಮಸ್ಕಿ ಪಟ್ಟಣಕ್ಕೆ ಭೇಟಿ ನೀಡಿದ ಮೂಲಭೂತ ಸೌಕರ್ಯದ ಆಶ್ವಾಸನೆ ನೀಡಿದ್ದರು. ಹಾಗೆ ಭೂಮಿ ಪೂಜೆ ನಡೆಸಿದ್ದರು. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮಸ್ಕಿಯ ಅಶೋಕ ಶಿಲಾಶಾಸನ ಅಭಿವೃದ್ಧಿ ಕಾಣದೆ ಹಾಗೇ ಉಳಿದು ಬಿಟ್ಟಿದೆ.

ಅಶೋಕ ಶಿಲಾಶಾಸನ ನೋಡಲು ದೇಶ- ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಲ್ಲಿ ಯಾತ್ರಿಕರಿಗೆ ಕುಡಿಯುವ ಶುದ್ಧವಾದ ಒಂದು ಗುಟುಕು ನೀರು ಕೂಡ ಸಿಗುವುದಿಲ್ಲ.

ಇಲ್ಲಿ ವಿಶ್ರಾಂತಿ ಪಡೆಯಲು ಉದ್ಯಾನವೇ ಇಲ್ಲ. ಹೈಟೆಕ್ ಶೌಚಾಲಯ ಇಲ್ಲ. ಸಚಿವರು- ಶಾಸಕರು ಅನೇಕರು ಬಂದು ಭೂಮಿಪೂಜೆ ಮಾಡಿ 
ಹೋದರೂ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.


ಮಸ್ಕಿ ಶಾಸಕರು ಪ್ರವಾಸೋದ್ಯಮ ಸಚಿವರು, ಮುಖ್ಯಮಂತ್ರಿಗಳಿಗೆ ಗಮನಕ್ಕೆ ತಂದು ಹೈಟೆಕ್ ಉದ್ಯಾನವನ ನಿರ್ಮಿಸಿ  ಶುದ್ಧವಾದ ಕುಡಿಯುವ ನೀರು ಹೈ ಟೆಕ್ ಶೌಚಾಲಯ,ಯಾತ್ರಿಕರಿಗೆ ಯಾತ್ರಿ ನಿವಾಸ್ 
ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಯಾವುದೇ ಅನುದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿಲ್ಲ. ಸರಕಾರ ಸಾವಿರಾರು ಕೋಟಿ ಅನುದಾನ ಬರುತ್ತದೆ. ಆದರೆ ಇತಿಹಾಸ ಇತಿಹಾಸ ಇತಿಹಾಸ ಪುಟದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಅಭಿವೃದ್ಧಿ ಮಾತ್ರ ಕಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು