8:25 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಅಶೋಕ ಶಿಲಾಶಾಸನ: ಇಲ್ಲಿಗಾಗಮಿಸಿದ ಪ್ರವಾಸಿಗರಿಗೆ ಸಿಗದು ಗುಟುಕು ಹನಿ ನೀರು!!

08/05/2022, 19:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣಕ್ಕೆ ಇತಿಹಾಸದಲ್ಲಿ ಹೆಸರಿದೆ. ಚುನಾವಣೆ ಸಂದರ್ಭದಲ್ಲಿ ಮಸ್ಕಿ ಹೆಸರು ದೆಹಲಿವರೆಗೆ ಮುಟ್ಟಿದೆ. ಪ್ರವಾಸೋದ್ಯಮ ಸಚಿವರೇ ಮಸ್ಕಿ ಪಟ್ಟಣಕ್ಕೆ ಭೇಟಿ ನೀಡಿದ ಮೂಲಭೂತ ಸೌಕರ್ಯದ ಆಶ್ವಾಸನೆ ನೀಡಿದ್ದರು. ಹಾಗೆ ಭೂಮಿ ಪೂಜೆ ನಡೆಸಿದ್ದರು. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮಸ್ಕಿಯ ಅಶೋಕ ಶಿಲಾಶಾಸನ ಅಭಿವೃದ್ಧಿ ಕಾಣದೆ ಹಾಗೇ ಉಳಿದು ಬಿಟ್ಟಿದೆ.

ಅಶೋಕ ಶಿಲಾಶಾಸನ ನೋಡಲು ದೇಶ- ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಲ್ಲಿ ಯಾತ್ರಿಕರಿಗೆ ಕುಡಿಯುವ ಶುದ್ಧವಾದ ಒಂದು ಗುಟುಕು ನೀರು ಕೂಡ ಸಿಗುವುದಿಲ್ಲ.

ಇಲ್ಲಿ ವಿಶ್ರಾಂತಿ ಪಡೆಯಲು ಉದ್ಯಾನವೇ ಇಲ್ಲ. ಹೈಟೆಕ್ ಶೌಚಾಲಯ ಇಲ್ಲ. ಸಚಿವರು- ಶಾಸಕರು ಅನೇಕರು ಬಂದು ಭೂಮಿಪೂಜೆ ಮಾಡಿ 
ಹೋದರೂ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.


ಮಸ್ಕಿ ಶಾಸಕರು ಪ್ರವಾಸೋದ್ಯಮ ಸಚಿವರು, ಮುಖ್ಯಮಂತ್ರಿಗಳಿಗೆ ಗಮನಕ್ಕೆ ತಂದು ಹೈಟೆಕ್ ಉದ್ಯಾನವನ ನಿರ್ಮಿಸಿ  ಶುದ್ಧವಾದ ಕುಡಿಯುವ ನೀರು ಹೈ ಟೆಕ್ ಶೌಚಾಲಯ,ಯಾತ್ರಿಕರಿಗೆ ಯಾತ್ರಿ ನಿವಾಸ್ 
ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಯಾವುದೇ ಅನುದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿಲ್ಲ. ಸರಕಾರ ಸಾವಿರಾರು ಕೋಟಿ ಅನುದಾನ ಬರುತ್ತದೆ. ಆದರೆ ಇತಿಹಾಸ ಇತಿಹಾಸ ಇತಿಹಾಸ ಪುಟದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಅಭಿವೃದ್ಧಿ ಮಾತ್ರ ಕಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು