8:43 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಮಸ್ಕಿಯ ಅಶೋಕ ಶಿಲಾಶಾಸನದ ತಾಣ: ಇಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯವೇ ಇಲ್ಲ!!

05/06/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ.ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನ ಬಹಳ ವರ್ಷಗಳಿಂದ ಅಭಿವೃದ್ಧಿ ಯಾಗದೆ ಹಾಗೆ ಉಳಿದುಬಿಟ್ಟಿದೆ. ಇತಿಹಾಸದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಪ್ರಸಿದ್ಧಿಯಾಗಿದೆ. ರಾಜ್ಯದಲ್ಲಿ ಪ್ರವಾಸಿಗರು ಅಶೋಕ ಶಿಲಾಶಾಸನ ವೀಕ್ಷಿಸಲು ದೂರದ ಊರಿನಿಂದ ಬರುತ್ತಾರೆ. ಆದರೆ ಸೌಕರ್ಯ ಮಾತ್ರ ಶೂನ್ಯ.

ಇಲ್ಲಿ ಯಾತ್ರಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಯಾತ್ರಿಕರಿಗೆ ಸರಿಯಾದ ಶೌಚಾಲಯಗಳಿಲ್ಲ. ದೂರದ ಊರಿಂದ ಬರುವರಿಗೆ ಆಲಮಟ್ಟಿ ತರಹದ ಉದ್ಯಾನವನ ಇಲ್ಲ. ಈಗಾಗಲೇ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಶಾಸಕರಾಗಿರುವಾಗ ಸಚಿವರು , ಸಂಸದರು, ಶಾಸಕರು ಸೇರಿದಂತೆ ಅನೇಕರು ಗುದ್ಲಿ ಪೂಜೆ ನೆರವೇರಿಸಿದ್ದರು.  ಏಕೆ ಏನೂ ಗೊತ್ತಿಲ್ಲ. ಆದರೂ ಮಸ್ಕಿ ಅಶೋಕ ಶಿಲಾಶಾಸನ ಇನ್ನು ಅಭಿವೃದ್ಧಿ ಕಾಣದೆ ಹಾಗೆ ಉಳಿದುಬಿಟ್ಟಿದೆ. ಇಂದಿನ ದಿನದಲ್ಲಿ ಪುರಾತತ್ವ ಇಲಾಖೆ ಪ್ರವಾಸೋದ್ಯಮ ಇಲಾಖೆ ಏಕೆ ಗಮನಹರಿಸುತ್ತಿಲ್ಲ. ಎಲ್ಲಾ ಕಡೆ ಎಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಆದರೆ ಮಸ್ಕಿ ನಾಡಿಗೆ ಅಶೋಕನ ಶಿಲಾ ಶಾಸನ ಅಭಿವೃದ್ಧಿಯಾಗದೆ ಹಾಗೆ ಉಳಿದಿದ್ದು ದುರ ಕಷ್ಟಕರ ಸಂಗಾತಿ ಎಂದು ಯಾತ್ರಿಕರು ಅಭಿಪ್ರಾಯಪಡುತ್ತಾರೆ.

ಜನಪ್ರತಿನಿಧಿಗಳು, ಸಚಿವರು, ಮುಖ್ಯಮಂತ್ರಿಗಳು ಉಪ ಚುನಾವಣೆ ನಿಮಿತ್ತ ಮಸ್ಕಿಗೆ ಬಂದಾಗ ಅವರು ಗಮನಕ್ಕೆ ಬಂದಿಲ್ಲವೇನೋ ಎಂದು ಜನ ಮಾತನಾಡಿಕೊಳ್ಳುತ್ತಾರೆ. ಅದು ಏನೇ ಇರಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಇದಕ್ಕೆ ಸಂಬಂಧಪಟ್ಟ ಪ್ರವಾಸೋದ್ಯಮ ಇಲಾಖೆ ಜನರಿಗೆ ಶುದ್ಧವಾದ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಬೇಕು. ಯಾತ್ರಿಕರಿಗಾಗಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಯಾತ್ರಿಕರಿಗಾಗಿ ಯಾತ್ರಿಕ ನಿಲಯಗಳ ಮಾಡಬೇಕೆನ್ನುವುದು ಒತ್ತಾಯವಾಗಿದೆ. ನೂತನವಾಗಿ ಆಯ್ಕೆಯಾದ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಇದಕ್ಕೆ ಗಮನಹರಿಸಬೇಕೆಂದು ನಾಗರಿಕರು ಒತ್ತಾಯಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು