2:01 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಮಸ್ಕಿಯ ಅಶೋಕ ಶಿಲಾಶಾಸನದ ತಾಣ: ಇಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯವೇ ಇಲ್ಲ!!

05/06/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ.ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನ ಬಹಳ ವರ್ಷಗಳಿಂದ ಅಭಿವೃದ್ಧಿ ಯಾಗದೆ ಹಾಗೆ ಉಳಿದುಬಿಟ್ಟಿದೆ. ಇತಿಹಾಸದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಪ್ರಸಿದ್ಧಿಯಾಗಿದೆ. ರಾಜ್ಯದಲ್ಲಿ ಪ್ರವಾಸಿಗರು ಅಶೋಕ ಶಿಲಾಶಾಸನ ವೀಕ್ಷಿಸಲು ದೂರದ ಊರಿನಿಂದ ಬರುತ್ತಾರೆ. ಆದರೆ ಸೌಕರ್ಯ ಮಾತ್ರ ಶೂನ್ಯ.

ಇಲ್ಲಿ ಯಾತ್ರಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಯಾತ್ರಿಕರಿಗೆ ಸರಿಯಾದ ಶೌಚಾಲಯಗಳಿಲ್ಲ. ದೂರದ ಊರಿಂದ ಬರುವರಿಗೆ ಆಲಮಟ್ಟಿ ತರಹದ ಉದ್ಯಾನವನ ಇಲ್ಲ. ಈಗಾಗಲೇ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಶಾಸಕರಾಗಿರುವಾಗ ಸಚಿವರು , ಸಂಸದರು, ಶಾಸಕರು ಸೇರಿದಂತೆ ಅನೇಕರು ಗುದ್ಲಿ ಪೂಜೆ ನೆರವೇರಿಸಿದ್ದರು.  ಏಕೆ ಏನೂ ಗೊತ್ತಿಲ್ಲ. ಆದರೂ ಮಸ್ಕಿ ಅಶೋಕ ಶಿಲಾಶಾಸನ ಇನ್ನು ಅಭಿವೃದ್ಧಿ ಕಾಣದೆ ಹಾಗೆ ಉಳಿದುಬಿಟ್ಟಿದೆ. ಇಂದಿನ ದಿನದಲ್ಲಿ ಪುರಾತತ್ವ ಇಲಾಖೆ ಪ್ರವಾಸೋದ್ಯಮ ಇಲಾಖೆ ಏಕೆ ಗಮನಹರಿಸುತ್ತಿಲ್ಲ. ಎಲ್ಲಾ ಕಡೆ ಎಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಆದರೆ ಮಸ್ಕಿ ನಾಡಿಗೆ ಅಶೋಕನ ಶಿಲಾ ಶಾಸನ ಅಭಿವೃದ್ಧಿಯಾಗದೆ ಹಾಗೆ ಉಳಿದಿದ್ದು ದುರ ಕಷ್ಟಕರ ಸಂಗಾತಿ ಎಂದು ಯಾತ್ರಿಕರು ಅಭಿಪ್ರಾಯಪಡುತ್ತಾರೆ.

ಜನಪ್ರತಿನಿಧಿಗಳು, ಸಚಿವರು, ಮುಖ್ಯಮಂತ್ರಿಗಳು ಉಪ ಚುನಾವಣೆ ನಿಮಿತ್ತ ಮಸ್ಕಿಗೆ ಬಂದಾಗ ಅವರು ಗಮನಕ್ಕೆ ಬಂದಿಲ್ಲವೇನೋ ಎಂದು ಜನ ಮಾತನಾಡಿಕೊಳ್ಳುತ್ತಾರೆ. ಅದು ಏನೇ ಇರಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಇದಕ್ಕೆ ಸಂಬಂಧಪಟ್ಟ ಪ್ರವಾಸೋದ್ಯಮ ಇಲಾಖೆ ಜನರಿಗೆ ಶುದ್ಧವಾದ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಬೇಕು. ಯಾತ್ರಿಕರಿಗಾಗಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಯಾತ್ರಿಕರಿಗಾಗಿ ಯಾತ್ರಿಕ ನಿಲಯಗಳ ಮಾಡಬೇಕೆನ್ನುವುದು ಒತ್ತಾಯವಾಗಿದೆ. ನೂತನವಾಗಿ ಆಯ್ಕೆಯಾದ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಇದಕ್ಕೆ ಗಮನಹರಿಸಬೇಕೆಂದು ನಾಗರಿಕರು ಒತ್ತಾಯಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು