8:33 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಅಶೋಕ ಶಿಲಾಶಾಸನ: ಇಲ್ಲಿಗಾಗಮಿಸಿದ ಪ್ರವಾಸಿಗರಿಗೆ ಸಿಗದು ಗುಟುಕು ಹನಿ ನೀರು!!

08/05/2022, 19:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣಕ್ಕೆ ಇತಿಹಾಸದಲ್ಲಿ ಹೆಸರಿದೆ. ಚುನಾವಣೆ ಸಂದರ್ಭದಲ್ಲಿ ಮಸ್ಕಿ ಹೆಸರು ದೆಹಲಿವರೆಗೆ ಮುಟ್ಟಿದೆ. ಪ್ರವಾಸೋದ್ಯಮ ಸಚಿವರೇ ಮಸ್ಕಿ ಪಟ್ಟಣಕ್ಕೆ ಭೇಟಿ ನೀಡಿದ ಮೂಲಭೂತ ಸೌಕರ್ಯದ ಆಶ್ವಾಸನೆ ನೀಡಿದ್ದರು. ಹಾಗೆ ಭೂಮಿ ಪೂಜೆ ನಡೆಸಿದ್ದರು. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮಸ್ಕಿಯ ಅಶೋಕ ಶಿಲಾಶಾಸನ ಅಭಿವೃದ್ಧಿ ಕಾಣದೆ ಹಾಗೇ ಉಳಿದು ಬಿಟ್ಟಿದೆ.

ಅಶೋಕ ಶಿಲಾಶಾಸನ ನೋಡಲು ದೇಶ- ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಲ್ಲಿ ಯಾತ್ರಿಕರಿಗೆ ಕುಡಿಯುವ ಶುದ್ಧವಾದ ಒಂದು ಗುಟುಕು ನೀರು ಕೂಡ ಸಿಗುವುದಿಲ್ಲ.

ಇಲ್ಲಿ ವಿಶ್ರಾಂತಿ ಪಡೆಯಲು ಉದ್ಯಾನವೇ ಇಲ್ಲ. ಹೈಟೆಕ್ ಶೌಚಾಲಯ ಇಲ್ಲ. ಸಚಿವರು- ಶಾಸಕರು ಅನೇಕರು ಬಂದು ಭೂಮಿಪೂಜೆ ಮಾಡಿ 
ಹೋದರೂ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.


ಮಸ್ಕಿ ಶಾಸಕರು ಪ್ರವಾಸೋದ್ಯಮ ಸಚಿವರು, ಮುಖ್ಯಮಂತ್ರಿಗಳಿಗೆ ಗಮನಕ್ಕೆ ತಂದು ಹೈಟೆಕ್ ಉದ್ಯಾನವನ ನಿರ್ಮಿಸಿ  ಶುದ್ಧವಾದ ಕುಡಿಯುವ ನೀರು ಹೈ ಟೆಕ್ ಶೌಚಾಲಯ,ಯಾತ್ರಿಕರಿಗೆ ಯಾತ್ರಿ ನಿವಾಸ್ 
ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಯಾವುದೇ ಅನುದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿಲ್ಲ. ಸರಕಾರ ಸಾವಿರಾರು ಕೋಟಿ ಅನುದಾನ ಬರುತ್ತದೆ. ಆದರೆ ಇತಿಹಾಸ ಇತಿಹಾಸ ಇತಿಹಾಸ ಪುಟದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಅಭಿವೃದ್ಧಿ ಮಾತ್ರ ಕಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು