8:23 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ

13/08/2022, 11:49

ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ.

ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ್ಲದ ವರ್ತನೆ ತೋರುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹೊಸ ಸುತ್ತೋಲೆ ಹೊರಡಿಸಿದ ಆರ್ ಬಿಐ, ಏಜೆಂಟರಿಗೆ ಗ್ರಾಹಕರ ಜೊತೆಗಿನ ವರ್ತನೆ ಬಗ್ಗೆ ಎಚ್ಚರಿಕೆ ನೀಡಿದೆ.

ಸಾಲ ವಸೂಲಿ ಸಂದರ್ಭದಲ್ಲಿ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸಬಾರದು. ಅನಪೇಕ್ಷಿತ ಮೆಸೇಜ್ ಗಳು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಕರೆ ಮಾಡಬಾರದು ಎಂದು ತನ್ನ ಸುತ್ತೋಲೆಯಲ್ಲಿ ಆರ್‌ಬಿಐ ಸೂಚಿಸಿದೆ.

ಗ್ರಾಹಕರ ಜೊತೆಗೆ ರಿಕವರಿ ಏಜೆಂಟರು ಸರಿಯಾಗಿ ನಡೆದುಕೊಳ್ಳಬೇಕು. ಯಾವುದೇ ಗ್ರಾಹಕರ ಜೊತೆಗೆ ಅನುಚಿತ ವರ್ತನೆ ತೋರುವುದು ಸರಿಯಲ್ಲ. ಸರಿಯಾದ ರೀತಿಯಲ್ಲಿ ಸಾಲ ವಸೂಲಾತಿ ಮಾಡಬೇಕು. ನಿಂದಿಸುವುದು ಅಥವಾ ಮಾನಸಿಕ-ದೈಹಿಕ ಕಿರುಕುಳ ನೀಡುವುದು ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೂಗೊಳ್ಳಬೇಕಾಗುತ್ತದೆ ಎಂದು ಕಠಿಣ ಸಂದೇಶ ರವಾನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು