5:47 PM Friday1 - May 2026
ಬ್ರೇಕಿಂಗ್ ನ್ಯೂಸ್
ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ…

ಇತ್ತೀಚಿನ ಸುದ್ದಿ

ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ

13/08/2022, 11:49

ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ.

ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ್ಲದ ವರ್ತನೆ ತೋರುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹೊಸ ಸುತ್ತೋಲೆ ಹೊರಡಿಸಿದ ಆರ್ ಬಿಐ, ಏಜೆಂಟರಿಗೆ ಗ್ರಾಹಕರ ಜೊತೆಗಿನ ವರ್ತನೆ ಬಗ್ಗೆ ಎಚ್ಚರಿಕೆ ನೀಡಿದೆ.

ಸಾಲ ವಸೂಲಿ ಸಂದರ್ಭದಲ್ಲಿ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸಬಾರದು. ಅನಪೇಕ್ಷಿತ ಮೆಸೇಜ್ ಗಳು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಕರೆ ಮಾಡಬಾರದು ಎಂದು ತನ್ನ ಸುತ್ತೋಲೆಯಲ್ಲಿ ಆರ್‌ಬಿಐ ಸೂಚಿಸಿದೆ.

ಗ್ರಾಹಕರ ಜೊತೆಗೆ ರಿಕವರಿ ಏಜೆಂಟರು ಸರಿಯಾಗಿ ನಡೆದುಕೊಳ್ಳಬೇಕು. ಯಾವುದೇ ಗ್ರಾಹಕರ ಜೊತೆಗೆ ಅನುಚಿತ ವರ್ತನೆ ತೋರುವುದು ಸರಿಯಲ್ಲ. ಸರಿಯಾದ ರೀತಿಯಲ್ಲಿ ಸಾಲ ವಸೂಲಾತಿ ಮಾಡಬೇಕು. ನಿಂದಿಸುವುದು ಅಥವಾ ಮಾನಸಿಕ-ದೈಹಿಕ ಕಿರುಕುಳ ನೀಡುವುದು ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೂಗೊಳ್ಳಬೇಕಾಗುತ್ತದೆ ಎಂದು ಕಠಿಣ ಸಂದೇಶ ರವಾನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು