12:37 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ

13/08/2022, 11:49

ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ.

ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ್ಲದ ವರ್ತನೆ ತೋರುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹೊಸ ಸುತ್ತೋಲೆ ಹೊರಡಿಸಿದ ಆರ್ ಬಿಐ, ಏಜೆಂಟರಿಗೆ ಗ್ರಾಹಕರ ಜೊತೆಗಿನ ವರ್ತನೆ ಬಗ್ಗೆ ಎಚ್ಚರಿಕೆ ನೀಡಿದೆ.

ಸಾಲ ವಸೂಲಿ ಸಂದರ್ಭದಲ್ಲಿ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸಬಾರದು. ಅನಪೇಕ್ಷಿತ ಮೆಸೇಜ್ ಗಳು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಕರೆ ಮಾಡಬಾರದು ಎಂದು ತನ್ನ ಸುತ್ತೋಲೆಯಲ್ಲಿ ಆರ್‌ಬಿಐ ಸೂಚಿಸಿದೆ.

ಗ್ರಾಹಕರ ಜೊತೆಗೆ ರಿಕವರಿ ಏಜೆಂಟರು ಸರಿಯಾಗಿ ನಡೆದುಕೊಳ್ಳಬೇಕು. ಯಾವುದೇ ಗ್ರಾಹಕರ ಜೊತೆಗೆ ಅನುಚಿತ ವರ್ತನೆ ತೋರುವುದು ಸರಿಯಲ್ಲ. ಸರಿಯಾದ ರೀತಿಯಲ್ಲಿ ಸಾಲ ವಸೂಲಾತಿ ಮಾಡಬೇಕು. ನಿಂದಿಸುವುದು ಅಥವಾ ಮಾನಸಿಕ-ದೈಹಿಕ ಕಿರುಕುಳ ನೀಡುವುದು ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೂಗೊಳ್ಳಬೇಕಾಗುತ್ತದೆ ಎಂದು ಕಠಿಣ ಸಂದೇಶ ರವಾನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು