12:23 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ: ಗೆಳೆಯನ ಕಾಣಲು ಚೆನ್ನೈ ನಿಂದ ಸುರತ್ಕಲ್ ಗೆ ಬಂದ ಎಂಬಿಬಿಎಸ್ ವಿದ್ಯಾರ್ಥಿನಿ

21/10/2022, 22:19

ಮಂಗಳೂರು(reporterlarnataka.com): ಇನ್‌ಸ್ಟಾಗ್ರಾಮ್‌ನಿಂದ ಪರಿಚಯವಾದ ಗೆಳೆಯ ಭೇಟಿಯಾಗಲು ದೂರದ ಚೆನ್ನೈ ನಿಂದ ಕಡಲ ತೀರದ ಸುರತ್ಕಲ್ ಗೆ ಆಗಮಿಸಿದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಪೇಚಿಗೆ ಸಿಲುಕಿದ ಘಟನೆ ನಡೆದಿದೆ.

ರಾಜಸ್ಥಾನ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ರೇಶು ಎಂಬಾಕೆ ಇನ್‌ಸ್ಟಾಗ್ರಾಮ್‌ನಿಂದ ಪರಿಚಯವಾದ ಎಂಜಿನಿಯರ್‌ ವಿದ್ಯಾರ್ಥಿಯ ಭೇಟಿಗೆ ಸುರತ್ಕಲ್‌ ಗೆ ಬಂದಿದ್ದಳು. ರೇಶು ಮಂಗಳೂರು ತಲುಪಿದಾಗ ಆಕೆಯ ಬ್ಯಾಗ್‌, ಮೊಬೈಲ್‌ ಕಳವಾಗಿತ್ತು. ಇದರಿಂದ ವಿಚಲಿತಳಾದ ಆಕೆ ಸುರತ್ಕಲ್‌ನ ಕಾಂತೇರಿ ದೈವಸ್ಥಾನದ ಬಳಿ ನಿಂತು ತನ್ನಲ್ಲಿದ್ದ ಚಿನ್ನ ಮಾರಾಟ ಮಾಡಲು ಸ್ಥಳೀಯರಲ್ಲಿ ವಿಚಾರಿಸಿದ್ದಳು. ಯುವತಿಯ ನಡೆ ಬಗ್ಗೆ ಸಂಶಯಗೊಂಡ ಸ್ಥಳೀಯರು ಸುರತ್ಕಲ್‌ ಪೊಲೀಸ್‌ ಠಾಣೆಗೆ ಕರೆತಂದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಿದರು.

ಠಾಣೆಯಲ್ಲಿ ಆಕೆಯನ್ನು ವಿಚಾರಿಸಿದಾಗ ಸ್ಥಳೀಯ ಸಂಸ್ಥೆಯ ಎಂಜಿನಿಯರ್‌ ವಿದ್ಯಾರ್ಥಿಯ ನೋಡಲು ಬಂದಿರುವ ವಿಷಯ ತಿಳಿದು ಬಂತು. ಇದೀಗ ಪೊಲೀಸರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು