1:27 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

02/01/2025, 20:07

ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ಆರಂಭಗೊಂಡಿರುವ ಚಲನಚಿತ್ರೋತ್ಸವವನ್ನು ಮುಂದಿನ ವರ್ಷದಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಗಿ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು.
ಅವರು ಗುರುವಾರ ನಗರದ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಕರಾವಳಿ ಉತ್ಸವದ ಅಂಗವಾಗಿ ನಡೆದ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಚಲನಚಿತ್ರೋತ್ಸವವನ್ನು ನಡೆಸಲಾಗಿದೆ. ಇದನ್ನು ಇನ್ನಷ್ಟು ವಿಸ್ತರಿಸಿ ಹೆಚ್ಚಿನ ಚಲನಚಿತ್ರಗಳನ್ನು ವೀಕ್ಷಿಸಲು ಅನುವಾಗುವಂತೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕೆಂಬ ಉದ್ದೇಶವಿದೆ ಎಂದು ಹೇಳಿದರು.
ಭಾರತದ ಸಿನಿಮಾ ಕ್ಷೇತ್ರದಲ್ಲಿ ಕರಾವಳಿ ಕರ್ನಾಟಕದ ಬಹಳಷ್ಟು ಸಾಧಕರು ಕೊಡುಗೆ ನೀಡಿದ್ದಾರೆ. ಹಿಂದಿ, ಕನ್ನಡದೊಂದಿಗೆ ಸ್ಥಳೀಯ ತುಳು, ಬ್ಯಾರಿ, ಕೊಂಕಣಿ ಭಾಷೆಗಳಲ್ಲಿ ಚಲನಚಿತ್ರೋತ್ಸವಗಳು ಮೂಡಿ ಬಂದಿರುವುದು ಇಲ್ಲಿನ ಕಲಾ ಶ್ರೀಮಂತಿಕೆಯನ್ನು ತೋರಿಸುತ್ತದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು.
ಚಲನಚಿತ್ರೋತ್ಸವವನ್ನು ಉದ್ಘಾಟಿಸಿದ ಸಂಗೀತ ನಿರ್ದೇಶಕ ಗುರುಕಿರಣ್ ಅವರು ಮಾತನಾಡಿ, ಸಿನಿಮಾ ಇಲ್ಲಿನ ಸಂಸ್ಕøತಿಯಾಗಿದೆ. ಎಲ್ಲಿ ಕಲೆಗೆ ಪ್ರಾಮುಖ್ಯತೆ ನೀಡಲಾಗುತ್ತದೆಯೋ ಅಲ್ಲಿ ಅಭಿವೃದ್ಧಿಯು ಉತ್ತಮವಾಗಿರುತ್ತದೆ. ರಾಜ ಮಹಾರಾಜರ ಕಾಲದಲ್ಲಿ ಕಲಾ ಚಟುವಟಿಕೆಗಳಿಗೆ ಒತ್ತು ನೀಡಿದ್ದರಿಂದ ಆಯಾ ಪ್ರದೇಶಗಳು ಪ್ರಗತಿ ಹೊಂದಿದೆ ಎಂದರು.
ಕಲೆಯನ್ನು ಕಲೆಯಾಗಿ ನೋಡಬೇಕೇ ಹೊರತು ಸಂಕುಚಿತ ಭಾವನೆಯಿಂದ ಕಾಣುವುದು ಸರಿಯಲ್ಲ ಎಂದು ಅವರು ಹೇಳಿದರು.
ಮೇಯರ್ ಮನೋಜ್ ಕುಮಾರ್ ಗುಣಮಟ್ಟದ ಚಿತ್ರಗಳಿಗೆ ಕರಾವಳಿಯಲ್ಲಿ ಸದಾ ಪ್ರೋತ್ಸಾಹ ದೊರಕಿದೆ ಎಂದರು.
ಭಾರತ್ ಸಿನಿಮಾದ ಚಿತ್ರಮಂದಿರದ ಮುಖ್ಯಸ್ಥ ಬಾಲಕೃಷ್ಣ ಶೆಟ್ಟಿ, ಸುಬ್ರಾಯ ಪೈ, ಹೆಚ್ಚುವರಿ ಜಿಲ್ಲಾಧಿಕಾರಿ, ಜಿ.ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹರ್ಷವರ್ಧನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು