1:12 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

02/01/2025, 20:07

ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ಆರಂಭಗೊಂಡಿರುವ ಚಲನಚಿತ್ರೋತ್ಸವವನ್ನು ಮುಂದಿನ ವರ್ಷದಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಗಿ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು.
ಅವರು ಗುರುವಾರ ನಗರದ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಕರಾವಳಿ ಉತ್ಸವದ ಅಂಗವಾಗಿ ನಡೆದ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಚಲನಚಿತ್ರೋತ್ಸವವನ್ನು ನಡೆಸಲಾಗಿದೆ. ಇದನ್ನು ಇನ್ನಷ್ಟು ವಿಸ್ತರಿಸಿ ಹೆಚ್ಚಿನ ಚಲನಚಿತ್ರಗಳನ್ನು ವೀಕ್ಷಿಸಲು ಅನುವಾಗುವಂತೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕೆಂಬ ಉದ್ದೇಶವಿದೆ ಎಂದು ಹೇಳಿದರು.
ಭಾರತದ ಸಿನಿಮಾ ಕ್ಷೇತ್ರದಲ್ಲಿ ಕರಾವಳಿ ಕರ್ನಾಟಕದ ಬಹಳಷ್ಟು ಸಾಧಕರು ಕೊಡುಗೆ ನೀಡಿದ್ದಾರೆ. ಹಿಂದಿ, ಕನ್ನಡದೊಂದಿಗೆ ಸ್ಥಳೀಯ ತುಳು, ಬ್ಯಾರಿ, ಕೊಂಕಣಿ ಭಾಷೆಗಳಲ್ಲಿ ಚಲನಚಿತ್ರೋತ್ಸವಗಳು ಮೂಡಿ ಬಂದಿರುವುದು ಇಲ್ಲಿನ ಕಲಾ ಶ್ರೀಮಂತಿಕೆಯನ್ನು ತೋರಿಸುತ್ತದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು.
ಚಲನಚಿತ್ರೋತ್ಸವವನ್ನು ಉದ್ಘಾಟಿಸಿದ ಸಂಗೀತ ನಿರ್ದೇಶಕ ಗುರುಕಿರಣ್ ಅವರು ಮಾತನಾಡಿ, ಸಿನಿಮಾ ಇಲ್ಲಿನ ಸಂಸ್ಕøತಿಯಾಗಿದೆ. ಎಲ್ಲಿ ಕಲೆಗೆ ಪ್ರಾಮುಖ್ಯತೆ ನೀಡಲಾಗುತ್ತದೆಯೋ ಅಲ್ಲಿ ಅಭಿವೃದ್ಧಿಯು ಉತ್ತಮವಾಗಿರುತ್ತದೆ. ರಾಜ ಮಹಾರಾಜರ ಕಾಲದಲ್ಲಿ ಕಲಾ ಚಟುವಟಿಕೆಗಳಿಗೆ ಒತ್ತು ನೀಡಿದ್ದರಿಂದ ಆಯಾ ಪ್ರದೇಶಗಳು ಪ್ರಗತಿ ಹೊಂದಿದೆ ಎಂದರು.
ಕಲೆಯನ್ನು ಕಲೆಯಾಗಿ ನೋಡಬೇಕೇ ಹೊರತು ಸಂಕುಚಿತ ಭಾವನೆಯಿಂದ ಕಾಣುವುದು ಸರಿಯಲ್ಲ ಎಂದು ಅವರು ಹೇಳಿದರು.
ಮೇಯರ್ ಮನೋಜ್ ಕುಮಾರ್ ಗುಣಮಟ್ಟದ ಚಿತ್ರಗಳಿಗೆ ಕರಾವಳಿಯಲ್ಲಿ ಸದಾ ಪ್ರೋತ್ಸಾಹ ದೊರಕಿದೆ ಎಂದರು.
ಭಾರತ್ ಸಿನಿಮಾದ ಚಿತ್ರಮಂದಿರದ ಮುಖ್ಯಸ್ಥ ಬಾಲಕೃಷ್ಣ ಶೆಟ್ಟಿ, ಸುಬ್ರಾಯ ಪೈ, ಹೆಚ್ಚುವರಿ ಜಿಲ್ಲಾಧಿಕಾರಿ, ಜಿ.ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹರ್ಷವರ್ಧನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು