12:23 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ; ಮಂಗಳೂರಿನಲ್ಲಿ 35 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ

11/03/2025, 20:42

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿನಲ್ಲಿ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಮಂಗಳವಾರ ಶಾಸಕ ಸಿ. ಎನ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರ್ವಜನಿಕ ಸಹಭಾಗಿತ್ವದ ಬದಲಿಗೆ ಸರ್ಕಾರ ಅಥವಾ ಎಪಿಎಂಸಿಯ ಸ್ವಂತ ನಿಧಿಯಿಂದ ಮಾರುಕಟ್ಟೆ ಅನುಷ್ಠಾನಗೊಳಿಸಲು ನಿರ್ಧರಿಸಿ ಆರ್ಥಿಕ ಇಲಾಖೆಗೆ ಕಡತ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ದಾಸನಪುರ, ಮೈಸೂರು, ಕೋಲಾರ ಎಪಿಎಂಸಿಗಳಲ್ಲಿ ಪಿಪಿಪಿ ಮಾದರಿಯಲ್ಲಿ ಬಯೋ ಸಿಎನ್ಜಿ ಪ್ಲಾಂಟ್ಗಳ ಸ್ಥಾಪನೆಗೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಅನುಮೋದನೆ ಪಡೆಯಲು ಡಿಪಿಆರ್ ಹಾಗೂ ಆರ್ಎಫ್ಪಿಗಳನ್ನು ಸಲ್ಲಿಸಲಾಗಿದೆ.
ರಾಯಚೂರಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಒಣಮೆಣಸಿನಕಾಯಿ ಮಾರುಕಟ್ಟೆ ನಿರ್ಮಿಸಲು ಅನುಮೋದನೆಯಾಗಿದ್ದು, ಟೆಂಡರ್ ಕರೆಯಲಾಗಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲು ವಿಸ್ತೃತ ಯೋಜನಾ ವರದಿ ಪಡೆಯಲಾಗಿದ್ದು, ಪರಿಶೀಲನೆ ಹಂತದಲ್ಲಿದೆ ಎಂದು ತಿಳಿಸಿದರು.
ರಾಜ್ಯದ ಎಲ್ಲ ಎಪಿಎಂಸಿಗಳ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದೆ. ಸೆಂಟರ್ ಫಾರ್ ಸ್ಮಾರ್ಟ್ ಗವರ್ನಸ್ ಸಹಾಯದೊಂದಿಗೆ ಇಆರ್ಪಿ ಅಭಿವೃದ್ಧಿಪಡಿಸಲಾಗುತ್ತಿದೆ. 8 ಮಾಡ್ಯೂಲ್ಗಳಲ್ಲಿ 4 ಮಾಡ್ಯೂಲ್ಗಳು ಪೂರ್ಣಗೊಂಡಿದ್ದು, ಇತರ 4 ಪ್ರಗತಿಯಲ್ಲಿವೆ.
ಬಳ್ಳಾರಿ, ಗದಗ, ರಾಣೆಬೆನ್ನೂರು ಹಾಗೂ ಮೈಸೂರು ಎಪಿಎಂಸಿಗಳಲ್ಲಿ ಶೀತಲಗೃಹ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಬಸವನಬಾಗೇವಾಡಿ ಮತ್ತು ಯಲಬುರ್ಗಾಗಳಲ್ಲಿ ಆರ್ಐಡಿಎಫ್ 29ರ ಅಡಿ ಶೀತಲಗೃಹ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ನಬಾರ್ಡ್ ಕಾಮಗಾರಿಗಳ ಯೋಜನೆ ಅಡಿಯಲ್ಲಿ ಗ್ರಾಮೀಣ ಮಾರುಕಟ್ಟೆಗಳ ಅಭಿವೃದ್ಧಿ ಮಾಡಲಿದ್ದು, ಆರ್ಐಡಿಎಫ್ -28 ಅಡಿ ಸುಮಾರು 179.13 ಕೋಟಿ ರೂ. ವೆಚ್ಚದಲ್ಲಿ 18 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅವುಗಳಲ್ಲಿ 6 ಪೂರ್ಣಗೊಂಡಿವೆ. 11 ಪ್ರಗತಿಯಲ್ಲಿದ್ದು, ಒಂದು ಕಾಮಗಾರಿ ಕೈಬಿಡಲಾಗಿದೆ ಎಂದು ಸಚಿವರು ತಿಳಿಸಿದರು.
ಆರ್ಐಡಿಎಫ್ -28ರ ಅಡಿ ಅಂದಾಜು 210 ಕೋಟಿ ರೂ. ವೆಚ್ಚದಲ್ಲಿ 70 ಕಾಮಗಾರಿಗಳನ್ನು ಕೈಗೊಂಡಿದ್ದು, 28 ಮುಗಿದಿವೆ, 42 ಕಾಮಗಾರಿಗಳು ಪ್ರಗತಿಯಲ್ಲಿವೆ.
ಆರ್ಐಡಿಎಫ್ -30ರ ಅಡಿಯಲ್ಲಿ 144.75 ಕೋಟಿ ರೂ. ವೆಚ್ಚದಲ್ಲಿ 10 ಕಾಮಗಾರಿ ಕೈಗೊಂಡಿದ್ದು, ಟೆಂಡರ್ ಕರೆಯಲಾಗಿದೆ. ಎಪಿಎಂಸಿ ಮಾರುಕಟ್ಟೆ ಶುಲ್ಕ ಮತ್ತು ಬಳಕೆದಾರರ ಶುಲ್ಕದಲ್ಲಿ ಮಾರುಕಟ್ಟೆ ಪ್ರಾಂಗಣದಲ್ಲಿ ರೈತಭವನ, ಮುಚ್ಚು ಹರಾಜುಕಟ್ಟೆ, ಶೌಚಾಲಯ, ರಸ್ತೆ, ಚರಂಡಿ,ಗೋದಾಮು, ಮಳಿಗೆ ಮತ್ತಿತರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್
ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು