1:41 AM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

21/06/2025, 15:11

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್‍ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕ ಆಚರಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .
ಈ ವರ್ಷದ ವಿಶ್ವ ಯೋಗ ದಿನದ ದ್ಯೇಯ ವಾಕ್ಯವಾಗಿರುವ ‘ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮದಲ್ಲಿ ಕೆಡೆಟ್ ಗಳು ಸಕ್ರಿಯವಾಗಿ ಭಾಗವಹಿಸಿ, ಯೋಗದ ಒಟ್ಟಾರೆ ಯೋಗಕ್ಷೇಮ , ಸಾಮರಸ್ಯಕ್ಕೆ ಸಹಕಾರ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಸಹಕಾರಿಯಾಗುವ ಬಗ್ಗೆ ತಿಳಿದರು .
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಸ್ವಾಗತಿಸಿದರು , ಮೇಜರ್‌ ಡಾ. ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ, ಪದ್ಮಾಸನ, ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು