9:33 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

21/06/2025, 15:11

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್‍ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕ ಆಚರಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .
ಈ ವರ್ಷದ ವಿಶ್ವ ಯೋಗ ದಿನದ ದ್ಯೇಯ ವಾಕ್ಯವಾಗಿರುವ ‘ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮದಲ್ಲಿ ಕೆಡೆಟ್ ಗಳು ಸಕ್ರಿಯವಾಗಿ ಭಾಗವಹಿಸಿ, ಯೋಗದ ಒಟ್ಟಾರೆ ಯೋಗಕ್ಷೇಮ , ಸಾಮರಸ್ಯಕ್ಕೆ ಸಹಕಾರ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಸಹಕಾರಿಯಾಗುವ ಬಗ್ಗೆ ತಿಳಿದರು .
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಸ್ವಾಗತಿಸಿದರು , ಮೇಜರ್‌ ಡಾ. ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ, ಪದ್ಮಾಸನ, ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು