10:36 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

21/06/2025, 15:11

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್‍ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕ ಆಚರಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .
ಈ ವರ್ಷದ ವಿಶ್ವ ಯೋಗ ದಿನದ ದ್ಯೇಯ ವಾಕ್ಯವಾಗಿರುವ ‘ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮದಲ್ಲಿ ಕೆಡೆಟ್ ಗಳು ಸಕ್ರಿಯವಾಗಿ ಭಾಗವಹಿಸಿ, ಯೋಗದ ಒಟ್ಟಾರೆ ಯೋಗಕ್ಷೇಮ , ಸಾಮರಸ್ಯಕ್ಕೆ ಸಹಕಾರ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಸಹಕಾರಿಯಾಗುವ ಬಗ್ಗೆ ತಿಳಿದರು .
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಸ್ವಾಗತಿಸಿದರು , ಮೇಜರ್‌ ಡಾ. ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ, ಪದ್ಮಾಸನ, ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು