8:38 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

21/06/2025, 15:11

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್‍ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕ ಆಚರಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .
ಈ ವರ್ಷದ ವಿಶ್ವ ಯೋಗ ದಿನದ ದ್ಯೇಯ ವಾಕ್ಯವಾಗಿರುವ ‘ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮದಲ್ಲಿ ಕೆಡೆಟ್ ಗಳು ಸಕ್ರಿಯವಾಗಿ ಭಾಗವಹಿಸಿ, ಯೋಗದ ಒಟ್ಟಾರೆ ಯೋಗಕ್ಷೇಮ , ಸಾಮರಸ್ಯಕ್ಕೆ ಸಹಕಾರ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಸಹಕಾರಿಯಾಗುವ ಬಗ್ಗೆ ತಿಳಿದರು .
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಸ್ವಾಗತಿಸಿದರು , ಮೇಜರ್‌ ಡಾ. ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ, ಪದ್ಮಾಸನ, ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು