8:38 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

21/06/2025, 15:11

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್‍ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕ ಆಚರಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .
ಈ ವರ್ಷದ ವಿಶ್ವ ಯೋಗ ದಿನದ ದ್ಯೇಯ ವಾಕ್ಯವಾಗಿರುವ ‘ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮದಲ್ಲಿ ಕೆಡೆಟ್ ಗಳು ಸಕ್ರಿಯವಾಗಿ ಭಾಗವಹಿಸಿ, ಯೋಗದ ಒಟ್ಟಾರೆ ಯೋಗಕ್ಷೇಮ , ಸಾಮರಸ್ಯಕ್ಕೆ ಸಹಕಾರ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಸಹಕಾರಿಯಾಗುವ ಬಗ್ಗೆ ತಿಳಿದರು .
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಸ್ವಾಗತಿಸಿದರು , ಮೇಜರ್‌ ಡಾ. ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ, ಪದ್ಮಾಸನ, ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು