10:41 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಇಂಟರ್ನೆಟ್ ಪಾಸ್ವರ್ಡ್ ರಿಸೆಟ್: ಕಾರ್ಕಳದ ವ್ಯಕ್ತಿಯ ಲಕ್ಷಾಂತರ ಹಣ ದೋಚಿದ ಖದೀಮರು

18/07/2022, 21:33

ಕಾರ್ಕಳ(reporterkarnataka.com): ಇಂಟರ್ನೆಟ್ ಪಾಸ್ವರ್ಡ್ ರಿಸೆಟ್ ಮಾಡಿ ವ್ಯಕ್ತಿಯೊಬ್ಬರ ಲಕ್ಷಾಂತರ ಹಣ ದೋಚಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲಾಗುಡ್ಡೆ ಯಲ್ಲಿ ನಡೆದಿದೆ. 

ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ರುಡಾಲ್ಫ್ ಡಿ’ಸೋಜಾ(44) ಎಂಬವರು ಹಣ ಕಳೆದು ಕೊಂಡವರು.  

ಅವರು 2018-19ನೆ ಸಾಲಿನ ಟಿಬಿಓ ಟಾಕ್‌ ಕಂಪೆನಿಯ ಸ್ಕೈಲೈನ್‌ ಎಂಟರ್‌ಪ್ರೈಸಸ್‌ ಮತ್ತು ಟ್ರಾವೆಲ್ಸ್‌ನಲ್ಲಿ ವಿಮಾನ, ರೈಲು ಟಿಕೆಟ್‌ ಬುಕ್‌ ಮಾಡುವ ಫ್ರಾಂಚೈಸಿ ಪಡೆದು ಸಂಸ್ಥೆಯ ಯೂಸರ್‌ ಐಡಿ ಹೊಂದಿದ್ದರು.

2022ರ ಎಪ್ರಿಲ್ ತಿಂಗಳಿನ ಕೊನೆಯಲ್ಲಿ ಟಿಬಿಓ ಕಂಪೆನಿಯಿಂದ ರುಡಾಲ್ಫ್ ಡಿ’ಸೋಜಾ ಅವರಿಗೆ ಕರೆ ಬಂದಿದ್ದು, ನಿಮ್ಮ ಐಡಿಗೆ 14,76,284 ರೂ. ಹಣ ಪಾವತಿಸಲಾಗಿದೆ. ಅದನ್ನು ಕೂಡಲೇ ಮರುಪಾವತಿ ಮಾಡುವಂತೆ ಸೂಚಿಸಲಾಗಿತ್ತು.ಆದರೆ ರುಡಾಲ್ಫ್ ಅವರು ಕಳೆದ ಎರಡು ವರ್ಷಗಳಿಂದ ಈ ಐಡಿಯನ್ನು ಬಳಸಿರುವುದಿಲ್ಲ. ಇವರ ಸಂಸ್ಥೆಯಲ್ಲಿ ಸೇಲ್ಸ್ ಮನ್‌ ಆಗಿ ಕೆಲಸ ಮಾಡುವ ವ್ಯಕ್ತಿಯು ರುಡಾಲ್ಫ್ ಅವರ ಐಡಿಯನ್ನು ಕದ್ದು, ಇನ್ನೋರ್ವನ ಮೂಲಕ ಕಂಪೆನಿಯ ಐಡಿ ಪಾಸ್‌ವರ್ಡ್‌ ರೀಸೆಟ್‌ ಮಾಡಿಸಿದ್ದ.

ರುಡಾಲ್ಫ್ ಅವರಿಂದಲೇ ಐಡಿ ಯನ್ನು ಬಳಸುತ್ತಿರುವಂತೆ ಬಿಂಬಿಸಿ, ಕಂಪೆನಿಯಿಂದ ಬಂದಿರುವ ಹಣವನ್ನು ಟಿಕೆಟ್ ಬುಕ್ಕಿಂಗ್‌ ಖರ್ಚು ಮಾಡಿ, ಹಣ ಮರುಪಾವತಿಸದೇ ಕಂಪೆನಿಗೆ ಹಾಗೂ ರುಡಾಲ್ಫ್ ಡಿ’ಸೋಜಾ ಅವರಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಉಡುಪಿಯ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು