2:09 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಇಂಟರ್ನೆಟ್ ಪಾಸ್ವರ್ಡ್ ರಿಸೆಟ್: ಕಾರ್ಕಳದ ವ್ಯಕ್ತಿಯ ಲಕ್ಷಾಂತರ ಹಣ ದೋಚಿದ ಖದೀಮರು

18/07/2022, 21:33

ಕಾರ್ಕಳ(reporterkarnataka.com): ಇಂಟರ್ನೆಟ್ ಪಾಸ್ವರ್ಡ್ ರಿಸೆಟ್ ಮಾಡಿ ವ್ಯಕ್ತಿಯೊಬ್ಬರ ಲಕ್ಷಾಂತರ ಹಣ ದೋಚಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲಾಗುಡ್ಡೆ ಯಲ್ಲಿ ನಡೆದಿದೆ. 

ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ರುಡಾಲ್ಫ್ ಡಿ’ಸೋಜಾ(44) ಎಂಬವರು ಹಣ ಕಳೆದು ಕೊಂಡವರು.  

ಅವರು 2018-19ನೆ ಸಾಲಿನ ಟಿಬಿಓ ಟಾಕ್‌ ಕಂಪೆನಿಯ ಸ್ಕೈಲೈನ್‌ ಎಂಟರ್‌ಪ್ರೈಸಸ್‌ ಮತ್ತು ಟ್ರಾವೆಲ್ಸ್‌ನಲ್ಲಿ ವಿಮಾನ, ರೈಲು ಟಿಕೆಟ್‌ ಬುಕ್‌ ಮಾಡುವ ಫ್ರಾಂಚೈಸಿ ಪಡೆದು ಸಂಸ್ಥೆಯ ಯೂಸರ್‌ ಐಡಿ ಹೊಂದಿದ್ದರು.

2022ರ ಎಪ್ರಿಲ್ ತಿಂಗಳಿನ ಕೊನೆಯಲ್ಲಿ ಟಿಬಿಓ ಕಂಪೆನಿಯಿಂದ ರುಡಾಲ್ಫ್ ಡಿ’ಸೋಜಾ ಅವರಿಗೆ ಕರೆ ಬಂದಿದ್ದು, ನಿಮ್ಮ ಐಡಿಗೆ 14,76,284 ರೂ. ಹಣ ಪಾವತಿಸಲಾಗಿದೆ. ಅದನ್ನು ಕೂಡಲೇ ಮರುಪಾವತಿ ಮಾಡುವಂತೆ ಸೂಚಿಸಲಾಗಿತ್ತು.ಆದರೆ ರುಡಾಲ್ಫ್ ಅವರು ಕಳೆದ ಎರಡು ವರ್ಷಗಳಿಂದ ಈ ಐಡಿಯನ್ನು ಬಳಸಿರುವುದಿಲ್ಲ. ಇವರ ಸಂಸ್ಥೆಯಲ್ಲಿ ಸೇಲ್ಸ್ ಮನ್‌ ಆಗಿ ಕೆಲಸ ಮಾಡುವ ವ್ಯಕ್ತಿಯು ರುಡಾಲ್ಫ್ ಅವರ ಐಡಿಯನ್ನು ಕದ್ದು, ಇನ್ನೋರ್ವನ ಮೂಲಕ ಕಂಪೆನಿಯ ಐಡಿ ಪಾಸ್‌ವರ್ಡ್‌ ರೀಸೆಟ್‌ ಮಾಡಿಸಿದ್ದ.

ರುಡಾಲ್ಫ್ ಅವರಿಂದಲೇ ಐಡಿ ಯನ್ನು ಬಳಸುತ್ತಿರುವಂತೆ ಬಿಂಬಿಸಿ, ಕಂಪೆನಿಯಿಂದ ಬಂದಿರುವ ಹಣವನ್ನು ಟಿಕೆಟ್ ಬುಕ್ಕಿಂಗ್‌ ಖರ್ಚು ಮಾಡಿ, ಹಣ ಮರುಪಾವತಿಸದೇ ಕಂಪೆನಿಗೆ ಹಾಗೂ ರುಡಾಲ್ಫ್ ಡಿ’ಸೋಜಾ ಅವರಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಉಡುಪಿಯ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು