12:09 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಇಂಟರ್ನೆಟ್ ಪಾಸ್ವರ್ಡ್ ರಿಸೆಟ್: ಕಾರ್ಕಳದ ವ್ಯಕ್ತಿಯ ಲಕ್ಷಾಂತರ ಹಣ ದೋಚಿದ ಖದೀಮರು

18/07/2022, 21:33

ಕಾರ್ಕಳ(reporterkarnataka.com): ಇಂಟರ್ನೆಟ್ ಪಾಸ್ವರ್ಡ್ ರಿಸೆಟ್ ಮಾಡಿ ವ್ಯಕ್ತಿಯೊಬ್ಬರ ಲಕ್ಷಾಂತರ ಹಣ ದೋಚಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲಾಗುಡ್ಡೆ ಯಲ್ಲಿ ನಡೆದಿದೆ. 

ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ರುಡಾಲ್ಫ್ ಡಿ’ಸೋಜಾ(44) ಎಂಬವರು ಹಣ ಕಳೆದು ಕೊಂಡವರು.  

ಅವರು 2018-19ನೆ ಸಾಲಿನ ಟಿಬಿಓ ಟಾಕ್‌ ಕಂಪೆನಿಯ ಸ್ಕೈಲೈನ್‌ ಎಂಟರ್‌ಪ್ರೈಸಸ್‌ ಮತ್ತು ಟ್ರಾವೆಲ್ಸ್‌ನಲ್ಲಿ ವಿಮಾನ, ರೈಲು ಟಿಕೆಟ್‌ ಬುಕ್‌ ಮಾಡುವ ಫ್ರಾಂಚೈಸಿ ಪಡೆದು ಸಂಸ್ಥೆಯ ಯೂಸರ್‌ ಐಡಿ ಹೊಂದಿದ್ದರು.

2022ರ ಎಪ್ರಿಲ್ ತಿಂಗಳಿನ ಕೊನೆಯಲ್ಲಿ ಟಿಬಿಓ ಕಂಪೆನಿಯಿಂದ ರುಡಾಲ್ಫ್ ಡಿ’ಸೋಜಾ ಅವರಿಗೆ ಕರೆ ಬಂದಿದ್ದು, ನಿಮ್ಮ ಐಡಿಗೆ 14,76,284 ರೂ. ಹಣ ಪಾವತಿಸಲಾಗಿದೆ. ಅದನ್ನು ಕೂಡಲೇ ಮರುಪಾವತಿ ಮಾಡುವಂತೆ ಸೂಚಿಸಲಾಗಿತ್ತು.ಆದರೆ ರುಡಾಲ್ಫ್ ಅವರು ಕಳೆದ ಎರಡು ವರ್ಷಗಳಿಂದ ಈ ಐಡಿಯನ್ನು ಬಳಸಿರುವುದಿಲ್ಲ. ಇವರ ಸಂಸ್ಥೆಯಲ್ಲಿ ಸೇಲ್ಸ್ ಮನ್‌ ಆಗಿ ಕೆಲಸ ಮಾಡುವ ವ್ಯಕ್ತಿಯು ರುಡಾಲ್ಫ್ ಅವರ ಐಡಿಯನ್ನು ಕದ್ದು, ಇನ್ನೋರ್ವನ ಮೂಲಕ ಕಂಪೆನಿಯ ಐಡಿ ಪಾಸ್‌ವರ್ಡ್‌ ರೀಸೆಟ್‌ ಮಾಡಿಸಿದ್ದ.

ರುಡಾಲ್ಫ್ ಅವರಿಂದಲೇ ಐಡಿ ಯನ್ನು ಬಳಸುತ್ತಿರುವಂತೆ ಬಿಂಬಿಸಿ, ಕಂಪೆನಿಯಿಂದ ಬಂದಿರುವ ಹಣವನ್ನು ಟಿಕೆಟ್ ಬುಕ್ಕಿಂಗ್‌ ಖರ್ಚು ಮಾಡಿ, ಹಣ ಮರುಪಾವತಿಸದೇ ಕಂಪೆನಿಗೆ ಹಾಗೂ ರುಡಾಲ್ಫ್ ಡಿ’ಸೋಜಾ ಅವರಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಉಡುಪಿಯ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು