7:15 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

03/10/2025, 21:22

ಬೆಂಗಳೂರು(reporterkarnataka.com): ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ತನ್ನ ಮೊದಲ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು.
ಸಪ್ಟೆಂಬರ್ 29ರಂದು ನಡೆದ ಈ ಕಾರ್ಯಕ್ರಮದಲ್ಲಿ ಎಂಸಿಎ ಹಂತದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ನೈಜ-ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ನೀಡುವ ನಾವೀನ್ಯಕಾರಿ ಐಒಟಿ ಯೋಜನೆಗಳನ್ನು ಪ್ರದರ್ಶಿಸಿದರು.
ಮುನೀನ್ ಪಾಷಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರೂಪಿಸಿದ ಈ ಯೋಜನೆಗಳು ದೈನಂದಿನ ಜೀವನದ ಅಡಚಣೆಗಳನ್ನು ತೊಡೆದುಹಾಕಲು ಸ್ಮಾರ್ಟ್ ಪರಿಹಾರಗಳನ್ನು ನೀಡಿದವು.
ವಿವಿಧ ವಿಭಾಗಗಳ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಭವಿಷ್ಯದ ಬೆಳವಣಿಗೆಗಳಿಗೆ ಸ್ಫೂರ್ತಿ ಪಡೆಯಲು ಎಂಸಿಎ ಹಂತದ ಪ್ರಥಮ ವರ್ಷದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಹಾಜರಿದ್ದ ಪ್ರೇಕ್ಷಕರು ವಿದ್ಯಾರ್ಥಿ ತಂಡಗಳೊಂದಿಗೆ ನೇರವಾಗಿ ಸಂವಾದ ನಡೆಸಿದರು ಮತ್ತು ಯೋಜನೆಗಳ ಕಾರ್ಯನಿರ್ವಹಣೆಯನ್ನು ಲೈವ್ ಪ್ರದರ್ಶನಗಳ ಮೂಲಕ ನೇರವಾಗಿ ಅನುಭವಿಸಿದರು.


ಈ ಪ್ರದರ್ಶನದ ಮೂಲಕ ಐಒಟಿ ತಂತ್ರಜ್ಞಾನದ ಸೃಜನಾತ್ಮಕ ಮತ್ತು ಪ್ರಾಯೋಗಿಕ ಬಳಕೆಯನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಪ್ರೋಟೋಟೈಪ್ಗಳನ್ನು ಕಾರ್ಯರೂಪದಲ್ಲಿ ನೋಡುವ ಮತ್ತು ಅವುಗಳ ವಿನ್ಯಾಸವನ್ನು ಅರ್ಥಮಾಡಿಕೊಳ್ಳುವ ಅವಕಾಶವು ಪ್ರೇಕ್ಷಕರಿಗೆ ಲಭಿಸಿತು. ಈ ಕಾರ್ಯಕ್ರಮವು ಶೈಕ್ಷಣಿಕ ಮತ್ತು ಪ್ರಾಯೋಗಿಕ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೀಡಿದ ಪ್ರೋತ್ಸಾಹಕರ ಪ್ರತಿಕ್ರಿಯೆಗಳು ತೋರಿಸಿಕೊಟ್ಟವು.
ಈ ಪ್ರಥಮ ಐಒಟಿ ಪ್ರದರ್ಶನವು ವಿಶ್ವವಿದ್ಯಾಲಯದಲ್ಲಿ ಪ್ರಯೋಗಾತ್ಮಕ ಕಲಿಕೆ, ನಾವಿನ್ಯತೆ ಮತ್ತು ಅಂತರ್ವಿಭಾಗೀಯ ಸಹಯೋಗವನ್ನು ಉತ್ತೇಜಿಸುವ ದಿಶೆಯಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿ ನಿಲ್ಲುತ್ತದೆ. ತರಗತಿಯ ಜ್ಞಾನವನ್ನು ಪ್ರಭಾವಶಾಲಿ ಪರಿಹಾರಗಳಾಗಿ ರೂಪಾಂತರಿಸುವ ವೇದಿಕೆಯನ್ನು ಇದು ವಿದ್ಯಾರ್ಥಿಗಳಿಗೆ ಒದಗಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು