7:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

28 ವರ್ಷ ಹಳೆಯ ನಕಲಿ ಅಂಕಪಟ್ಟಿ ಪ್ರಕರಣ: ಅಯೋಧ್ಯೆ ಬಿಜೆಪಿ ಶಾಸಕ ಅನರ್ಹ; 5 ವರ್ಷ ಜೈಲು

12/12/2021, 11:50

ಲಕ್ನೋ(reporterkarnataka.com): ಅಯೋಧ್ಯೆಯ
ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕ ಪಟ್ಟಿ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿ ಜೈಲು ಶಿಕ್ಷೆ ವಿಧಿಸಿದೆ.

ಇಂದ್ರ ಪ್ರತಾಪ್ ಅವರಿಗೆ 8 ಸಾವಿರ ರೂ. ದಂಡದ ಜೊತೆಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಧೀಶೆ ಪೂಜಾ ಸಿಂಗ್ ಅವರು ತೀರ್ಪು ನೀಡಿದ್ದಾರೆ.

ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು,ತಿವಾರಿ ಅವರ 5 ವರ್ಷಗಳ ಶಾಸಕ ಸ್ಥಾನದ ಅಧಿಕಾರಾವಧಿ ಇನ್ನು ಕೆಲವೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನವೇ ತೀರ್ಪು ಪ್ರಕಟವಾಗಿದೆ.

ತಿವಾರಿ ವಿರುದ್ಧ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ 1991ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಿವಾರಿ ಅವರು ಮೊದಲ ವರ್ಷದ ನಕಲಿ ಅಂಕಪಟ್ಟಿ ತಯಾರಿಸಿ ಬಿಎಸ್ಸಿ ಎರಡನೇ ವರ್ಷಕ್ಕೆ ಪ್ರವೇಶ ಪಡೆದಿದ್ದರು ಎಂದು ಪ್ರಿನ್ಸಿಪಾಲ್ ಯದುವಂಶ್ ರಾಮ್ ತ್ರಿಪಾಠಿ ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದ ಕುರಿತು 28 ವರ್ಷಗಳ ಕಾಲ ದೀರ್ಘ ವಿಚಾರಣೆ ನಡೆದಿತ್ತು. ಈ ನಡುವೆ ಪ್ರಿನ್ಸಿಪಾಲ್ ತ್ರಿಪಾಠಿ ಸಾವನ್ನಪ್ಪಿದ್ದರು.

……

ಇತ್ತೀಚಿನ ಸುದ್ದಿ

ಜಾಹೀರಾತು