10:37 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Irrigation project | ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ: ಅನುಮತಿ ನೀಡಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಕ್ಕೊತ್ತಾಯ

03/04/2025, 23:22

ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ ಅವರಿಗೆ ಬೇಡಿಕೆ ಪತ್ರ ಸಲ್ಲಿಸಿದರು.

ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ ಅವರು, ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ ಎಂದಿದ್ದಾರೆ.
ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ‌ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು