9:01 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಟಿ

15/08/2025, 21:09

ನವದೆಹಲಿ(reporterkarnataka.com): ಡಿಸಿಎಂ ಡಿ.ಕೆ. ಶಿವಕುಮಾರ್‌ ʼಧರ್ಮಸ್ಥಳದ ವಿರುದ್ಧ ಷಡ್ಯಂತರ ನಡೆದಿದೆʼ ಎಂದಿದ್ದಾರೆ. ಆತುರದಲ್ಲಿ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರದ್ದೇ ಷಡ್ಯಂತರವಿದೆಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ.
ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತರ ಇರುವುದು ಡಿಸಿಎಂಗೆ ಗೊತ್ತಿದೆ ಅಂದಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಾಗದೇ ಹೋಯಿತೇ? ಎಂದು ಪ್ರಶ್ನಿಸಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಅನಾಮಿಕ ಶವಗಳನ್ನು ಹೂತು ಹಾಕಿದೆ ಎಂಬ ಅನಾಮಿಕನ ಆರೋಪ ಕುರಿತಂತೆ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಸರ್ಕಾರ, ಆತುರದಲ್ಲಿ SIT ರಚಿಸುವ ಅವಶ್ಯಕತೆ ಏನಿತ್ತು? ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

*ಧರ್ಮಸ್ಥಳಕ್ಕೆ ಕಪ್ಪು ಮಸಿ-ಸರ್ಕಾರದ್ದೂ ಸಾಥ್‌ ಇದೆಯೇ?:* ತನಿಖೆಗೆ ಒತ್ತಡ, ಒತ್ತಾಯ ಹೆಚ್ಚಿದ್ದರಿಂದ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿತ್ತು. ಆದರೆ‌, ಆತುರದಲ್ಲಿ ಇಂಥ ನಿರ್ಧಾರ ತೆಗೆದುಕೊಂಡು ಧರ್ಮಸ್ಥಳಕ್ಕೆ ಕಪ್ಪು ‌ಮಸಿ ಬಳಿಯುವ ಯತ್ನಕ್ಕೆ ಸರ್ಕಾರವೂ ಸಾಥ್ ನೀಡಿದೆಯೇ? ಇದರಲ್ಲಿ ಸರ್ಕಾರದ್ದೇ ಷಡ್ಯಂತರ ಏನಾದರೂ ಇದೆಯೇ? ಎಂದು ಸಚಿವ ಜೋಶಿ ಮಾರ್ಮಿಕವಾಗಿ ಹೇಳಿದ್ದಾರೆ.

*ಡಿಸಿಎಂಗೆ ಗೊತ್ತಾದ ವಿಚಾರ ಸಿಎಂಗೆ ಗೊತ್ತಾಗಲಿಲ್ಲವೇ?:* ಡಿಸಿಎಂ ಡಿಕೆ ಶಿವಕುಮಾರ್, ʼಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಯಾರದ್ದೆಂದು ಹೇಳಲ್ಲ. ಒಳ್ಳೇ ಯೋಜನೆ, ತಂತ್ರಗಾರಿಕೆ ಹೆಣೆದು ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ. ಆದರೆ, ಯಾರು? ಏನು? ಅಂತ ಮಾತನಾಡಲು ನಾನು ಹೋಗುವುದಿಲ್ಲ. ತೇಜೋವಧೆ ಮೂಲಕ ನೂರಾರು ವರ್ಷಗಳ ಪರಂಪರೆ ಹಾಳು ಮಾಡಲು ಹೊರಟಿದ್ದಾರೆʼ ಎಂದಿದ್ದಾರೆ. ಡಿಸಿಎಂಗೆ ಗೊತ್ತಿರುವ ಈ ವಿಚಾರ ಸಿಎಂಗೆ ಗೊತ್ತಾಗಿರಲಿಲ್ಲವೇ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್​ ಹೇಳುವಂತೆ ಷಡ್ಯಂತರ ನಡೆಯುತ್ತಿದೆ ಎಂಬ ವಿಚಾರ ಗೊತ್ತಾದ ಮೇಲೂ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ SIT ರಚಿಸಿದ್ದೇಕೆ? ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಪ್ರಸಂಗವಾದರೂ ಏನಿತ್ತು? ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.

*ಗುಡ್ಡ ಅಗೆದರೂ ಇಲಿ ಹಿಡಿಯದಂತಾದ ಸರ್ಕಾರ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತ್ಯ ತಿಳಿದಿದ್ದರೂ SIT ತನಿಖೆ, ಶೋಧ ಕಾರ್ಯ, ಅಗೆತ ಕಾರ್ಯಾಚರಣೆಗೆ ಆದೇಶ ನೀಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್‌ ತನಿಖೆ ಬಳಿಕ ಕುರುಹುಗಳೇನಾದರೂ ಸಿಕ್ಕಿದ್ದೇ ಆಗಿದ್ದಲ್ಲಿ SIT ರಚಿಸಿ ಹೆಚ್ಚಿನ ತನಿಖೆ ಮುಂದುವರಿಸಬಹುದಿತ್ತು. ಆದರೆ, ʼಸರ್ಕಾರ ಗುಡ್ಡ ಅಗೆದು ಇಲಿ ಹಿಡಿಯದಂತೆʼಯೂ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು