9:42 PM Saturday25 - April 2026
ಬ್ರೇಕಿಂಗ್ ನ್ಯೂಸ್
ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಟಿ

15/08/2025, 21:09

ನವದೆಹಲಿ(reporterkarnataka.com): ಡಿಸಿಎಂ ಡಿ.ಕೆ. ಶಿವಕುಮಾರ್‌ ʼಧರ್ಮಸ್ಥಳದ ವಿರುದ್ಧ ಷಡ್ಯಂತರ ನಡೆದಿದೆʼ ಎಂದಿದ್ದಾರೆ. ಆತುರದಲ್ಲಿ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರದ್ದೇ ಷಡ್ಯಂತರವಿದೆಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ.
ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತರ ಇರುವುದು ಡಿಸಿಎಂಗೆ ಗೊತ್ತಿದೆ ಅಂದಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಾಗದೇ ಹೋಯಿತೇ? ಎಂದು ಪ್ರಶ್ನಿಸಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಅನಾಮಿಕ ಶವಗಳನ್ನು ಹೂತು ಹಾಕಿದೆ ಎಂಬ ಅನಾಮಿಕನ ಆರೋಪ ಕುರಿತಂತೆ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಸರ್ಕಾರ, ಆತುರದಲ್ಲಿ SIT ರಚಿಸುವ ಅವಶ್ಯಕತೆ ಏನಿತ್ತು? ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

*ಧರ್ಮಸ್ಥಳಕ್ಕೆ ಕಪ್ಪು ಮಸಿ-ಸರ್ಕಾರದ್ದೂ ಸಾಥ್‌ ಇದೆಯೇ?:* ತನಿಖೆಗೆ ಒತ್ತಡ, ಒತ್ತಾಯ ಹೆಚ್ಚಿದ್ದರಿಂದ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿತ್ತು. ಆದರೆ‌, ಆತುರದಲ್ಲಿ ಇಂಥ ನಿರ್ಧಾರ ತೆಗೆದುಕೊಂಡು ಧರ್ಮಸ್ಥಳಕ್ಕೆ ಕಪ್ಪು ‌ಮಸಿ ಬಳಿಯುವ ಯತ್ನಕ್ಕೆ ಸರ್ಕಾರವೂ ಸಾಥ್ ನೀಡಿದೆಯೇ? ಇದರಲ್ಲಿ ಸರ್ಕಾರದ್ದೇ ಷಡ್ಯಂತರ ಏನಾದರೂ ಇದೆಯೇ? ಎಂದು ಸಚಿವ ಜೋಶಿ ಮಾರ್ಮಿಕವಾಗಿ ಹೇಳಿದ್ದಾರೆ.

*ಡಿಸಿಎಂಗೆ ಗೊತ್ತಾದ ವಿಚಾರ ಸಿಎಂಗೆ ಗೊತ್ತಾಗಲಿಲ್ಲವೇ?:* ಡಿಸಿಎಂ ಡಿಕೆ ಶಿವಕುಮಾರ್, ʼಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಯಾರದ್ದೆಂದು ಹೇಳಲ್ಲ. ಒಳ್ಳೇ ಯೋಜನೆ, ತಂತ್ರಗಾರಿಕೆ ಹೆಣೆದು ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ. ಆದರೆ, ಯಾರು? ಏನು? ಅಂತ ಮಾತನಾಡಲು ನಾನು ಹೋಗುವುದಿಲ್ಲ. ತೇಜೋವಧೆ ಮೂಲಕ ನೂರಾರು ವರ್ಷಗಳ ಪರಂಪರೆ ಹಾಳು ಮಾಡಲು ಹೊರಟಿದ್ದಾರೆʼ ಎಂದಿದ್ದಾರೆ. ಡಿಸಿಎಂಗೆ ಗೊತ್ತಿರುವ ಈ ವಿಚಾರ ಸಿಎಂಗೆ ಗೊತ್ತಾಗಿರಲಿಲ್ಲವೇ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್​ ಹೇಳುವಂತೆ ಷಡ್ಯಂತರ ನಡೆಯುತ್ತಿದೆ ಎಂಬ ವಿಚಾರ ಗೊತ್ತಾದ ಮೇಲೂ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ SIT ರಚಿಸಿದ್ದೇಕೆ? ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಪ್ರಸಂಗವಾದರೂ ಏನಿತ್ತು? ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.

*ಗುಡ್ಡ ಅಗೆದರೂ ಇಲಿ ಹಿಡಿಯದಂತಾದ ಸರ್ಕಾರ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತ್ಯ ತಿಳಿದಿದ್ದರೂ SIT ತನಿಖೆ, ಶೋಧ ಕಾರ್ಯ, ಅಗೆತ ಕಾರ್ಯಾಚರಣೆಗೆ ಆದೇಶ ನೀಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್‌ ತನಿಖೆ ಬಳಿಕ ಕುರುಹುಗಳೇನಾದರೂ ಸಿಕ್ಕಿದ್ದೇ ಆಗಿದ್ದಲ್ಲಿ SIT ರಚಿಸಿ ಹೆಚ್ಚಿನ ತನಿಖೆ ಮುಂದುವರಿಸಬಹುದಿತ್ತು. ಆದರೆ, ʼಸರ್ಕಾರ ಗುಡ್ಡ ಅಗೆದು ಇಲಿ ಹಿಡಿಯದಂತೆʼಯೂ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು