5:33 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಐಎಸ್ ಸಿ ಮಂಗಳೂರು ವತಿಯಿಂದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಮಕ್ಕಳ ದಿನಾಚರಣೆ: ಚಿಣ್ಣರಿಗೆ ವಿವಿಧ ಸ್ಪರ್ಧೆ

14/11/2021, 09:03

ಮಂಗಳೂರು(reporterkarnataka.com):
ಇಂಡಿಯನ್ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಹಾಗೂ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯ ಜಂಟಿ ಆಶ್ರಯದಲ್ಲಿ ನಗರದ ಬಲ್ಲಾಳ್ ಬಾಗ್ ನಲ್ಲಿರುವ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿವಿಧ ಸ್ಪರ್ಧೆ ನಡೆಯಿತು.

ಸಂಗೀತ, ಡ್ಯಾನ್ಸ್, ಕಥೆ ಹೇಳುವ ಸ್ಪರ್ಧೆ, ಮೆಮೊರಿ ಗೇಮ್ಸ್, ಯೋಗ ಮುಂತಾದ ಸ್ಪರ್ಧೆಗಳನ್ನು ಮಕ್ಕಳಿಗೆ ಏರ್ಪಡಿಸಲಾಯಿತು. 


ಪ್ರಸಾದ್ ಆರ್ಟ್ ಗ್ಯಾಲರಿಯ ನಿರ್ದೇಶಕ ಕೋಟಿ ಪ್ರಸಾದ್ ಆಳ್ವ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಇದರ ಅಧ್ಯಕ್ಷ ಹರಿಪ್ರಸಾದ್ ರೈ, ಅತಿಥಿಗಳಾಗಿ ಮಂಗಳೂರು ಮೀನುಗಾರಿಕಾ ಕಾಲೇಜಿನ ನಿವೃತ್ತ ಡೀನ್ ಪ್ರೊಫೆಸರ್ ಡಾ.  ಶಿವಪ್ರಕಾಶ್ ಹಾಗೂ  ಪ್ರಸಾದ್ ಆರ್ಟ್ ಗ್ಯಾಲರಿಯ ಗಣೇಶ್ ಸೋಮಯಾಜಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಪ್ರಸಿದ್ಧ ಕಲಾವಿದ ಗಣೇಶ್ ಸೋಮಯಾಜಿ ಮಾತನಾಡಿ, ಇಂತಹ ಪ್ರದರ್ಶನವು ಮಕ್ಕಳ ಜೀವನದ ಟರ್ನಿಂಗ್ ಪಾಯಿಂಟ್ ಹಾಗೂ ಅವರಿಗೆ ಮುಂದಕ್ಕೆ ಬರಲು ಅವಕಾಶ ನೀಡುತ್ತದೆ ಎಂದರು.

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಇದರ ಅಧ್ಯಕ್ಷ ಹರಿಪ್ರಸಾದ್ ರೈ ಅವರು ಮಾತನಾಡಿ, ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ತರಲು ಇಂತಹ ಸ್ಪರ್ಧೆಗಳು ಸಹಕಾರಿ. ಹೆಚ್ಚು ಹೆಚ್ಚು ಮಕ್ಕಳು ಮುಂದಿನ ದಿನಗಳಲ್ಲಿ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವಂತಾಗಲಿ ಎಂದು ಆಶಿಸಿದರು. 

ಲಯನ್ಸ್ ವತಿಯಿಂದ ಶಾಂತಿಗಾಗಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದ ನಿಕಿತಾ ಹಾಗೂ ಪ್ರೋತ್ಸಾಹಕರ ಬಹುಮಾನ ಪಡೆದ ನಿಶಿತಾ ಸಹೋದರಿಯರಿಗೆ ಸ್ಮರಣಿಕೆ ನೀಡಲಾಯಿತು. ಅತಿಥಿಯಾಗಿ ಮೀನುಗಾರಿಕಾ ಕಾಲೇಜಿನ ನಿವೃತ್ತ ಡೀನ್ ಪ್ರೊಫೆಸರ್ ಡಾ. ಶಿವಪ್ರಕಾಶ್ ಅವರು ಮಾತನಾಡಿ, ಯಾವುದೇ ಕಲೆಯಾಗಲಿ, ಆ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಕಲೆಯಲ್ಲಿ ನೈಜ್ಯತೆ ಇರಬೇಕೆಂದು ಉದಾಹರಣೆ ಸಹಿತ ವಿವರಿಸಿದರು ಹಾಗೂ ಸ್ಥಳದಲ್ಲೇ ವಿದ್ಯಾರ್ಥಿನಿಯ ಭಾವಚಿತ್ರವನ್ನು ಬಿಡಿಸಿ ಗಮನ ಸೆಳೆದರು. 

ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ಭಾಗವಹಿಸಿದ ಎಲ್ಲ ಮಕ್ಕಳಿಗೆ ಸಮಾಧಾನಕರ ಬಹುಮಾನ ವಿತರಿಸಲಾಯಿತು. 


ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಫ್ಲೇವಿ ಗ್ಲಾಡಿಸ್  ಡಿಮೆಲ್ಲೋ, ಪೂರ್ಣಿಮಾ ರತನ್, ರಂಜಿತ್, ಲತಾ ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು.

ಪ್ರಸಾದ್ ಆರ್ಟ್ ಗ್ಯಾಲರಿಯ ಮೇಘನಾ ಹಾಗೂ ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸಂದೀಪ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು