ಇತ್ತೀಚಿನ ಸುದ್ದಿ
ಈಶ್ವರಮಂಗಲ: ಶ್ರೀ ಭಾರತೀ ಅಮರಜ್ಯೋತಿ ಥೀಮ್ ಪಾರ್ಕ್ ಗೃಹ ಸಚಿವ ಅಮಿತ್ ಶಾ ಲೋಕಾರ್ಪಣೆ
11/02/2023, 20:02

ಪುತ್ತೂರು(reporterkarnataka.com): ಇಲ್ಲಿಗೆ ಸಮೀಪದ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು.
ನಂತರ ಸಂದರ್ಶಕರ ಪುಸ್ತಕದಲ್ಲಿ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ನಳೀನಕುಮಾರ್ , ಧರ್ಮಶ್ರೀ ಪ್ರತಿಷ್ಠಾನ ಪ್ರತಿಷ್ಠಾನದ ಪ್ರಮುಖರು ಉಪಸ್ಥಿತರಿದ್ದರು.