11:07 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಈಶ್ವರಪ್ಪ ಅಸಮಾಧಾನ ಎರಡು ದಿನಗಳಲ್ಲಿ ಪರಿಹಾರ: ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ

16/03/2024, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆ.ಎಸ್. ಈಶ್ವರಪ್ಪ ಹಿರಿಯ ನಾಯಕರು. ಟಿಕೆಟ್ ಸಂಬಂಧಿಸಿದಂತೆ ಎದ್ದರುವ ಅಸಮಾಧಾನ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರವಾಗಿ ಅವರು ಚಿಕ್ಕಮಗಳೂರಿನಲ್ಲಿ ಮಾತನಾಡಿದರು.
ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು,ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ.
ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು ಸತ್ಯ.
ಹಾವೇರಿ ಟಿಕೆಟ್ ಕಾಂತೇಶ್ ಗೆ ನೀಡಬೇಕಿತ್ತು ಎಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ. ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರ ಬಹುದು. ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಕೋಟ ಶ್ರೀನಿವಾಸ ಪೂಜಾರಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು