4:29 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ; ಪುಷ್ಪಕ್ ಆರ್ ಎಲ್ ವಿ ಯಶಸ್ವಿ ಲ್ಯಾಂಡಿಂಗ್; ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಇದು!

24/06/2024, 18:01

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಚಂದ್ರಯಾನ ಯಶಸ್ವಿಯಾಗಿ ನಿರ್ವಹಿಸಿದ ಇಸ್ರೋ ಮತ್ತೊಂದು ಸಾಧನೆಯ ಮೈಲುಗಲ್ಲು ಸ್ಥಾಪಿಸಿದೆ. ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಯಶಸ್ವಿಯಾಗಿ ಮಾಡಿ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ನಾಯಕನಹಟ್ಟಿ ಹೋಬಳಿಯ ಕುದಾಪುರ ಬಳಿ ಇರುವ ಡಿಆರ್ ಡಿಒ ಆವರಣದ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.
ಇಸ್ರೋ ವಿಜ್ಞಾನಿಗಳು ಇತ್ತೀಚೆಗೆ ಚಂದ್ರಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತದ ನೌಕೆಯನ್ನು ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಲಾಗಿತ್ತು. ಇದೀಗ ಇಸ್ರೋ ಸೌರಯಾನ ನಡೆಸಿದ್ದು, ಸೂರ್ಯನ ಬಗ್ಗೆ ಅಧ್ಯಯನ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು