2:43 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ISS | ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಸ್ಪೇಸ್‌ಎಕ್ಸ್ ಕ್ಯಾಪ್ಸುಲ್: ಸುನೀತಾ ವಿಲಿಯಂ, ವಿಲ್ಮೋರ್ ಭೂಮಿಗೆ ಮರಳುವ ಹಾದಿ ಸುಗಮ

16/03/2025, 23:30

reporterkarnataka.com

ಸ್ಪೇಸ್‌ಎಕ್ಸ್ ಕ್ಯಾಪ್ಸುಲ್ ಭಾನುವಾರ ಮುಂಜಾನೆ ನಾಲ್ವರು ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಯಶಸ್ವಿಯಾಗಿ ತಲುಪಿಸಿದ್ದು, ಇದರೊಂದಿಗೆ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಮರಳಿ ಭೂಮಿಗೆ ಕರೆದು ತರುವ ಹಾದಿ ಸುಗಮವಾಗಿದೆ.
ಸುಮಾರು 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರನ್ನು ಮನೆಗೆ ಕರೆತರುವ ಗುರಿಯನ್ನು ಇದು ಹೊಂದಿದೆ.
ಶುಕ್ರವಾರ ಸಂಜೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯೊಂದಿಗೆ ಸ್ಪೇಸ್ ಎಕ್ಸ್ ನಾಸಾದ ಕ್ರ್ಯೂ -10 ನಾಲ್ವರು ಗಗನಯಾತ್ರಿಗಳನ್ನು ಹೊತ್ತು ಪ್ರಯಾಣ ಪ್ರಾರಂಭಿಸಿತ್ತು. ಸುಮಾರು 29 ಗಂಟೆಗಳ ನಂತರ ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ಭಾನುವಾರದಂದು ಬೆಳಿಗ್ಗೆ 4:04 GMT ಕ್ಕೆ ISS ನೊಂದಿಗೆ ಡಾಕ್ ಮಾಡಿತು.
ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಅಸಮರ್ಪಕ ಕಾರ್ಯದಿಂದ
ಸುನಿತಾ ಮಿಲಿಯಂ ಮತ್ತು ವಿಲ್ಮೋರ್ ಅವರು ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದರು. ಇದರಿಂದ ವಿಲ್ಮೋರ್ ಮತ್ತು ವಿಲಿಯಮ್ಸ್ ಅವರನ್ನು ಮರಳಿ ಭೂಮಿಗೆ ಕರೆದು ತರುವ ಕಾರ್ಯ ವಿಳಂಬವಾಗಿತ್ತು.
ಮೂಲತಃ, ಈ ಇಬ್ಬರು ಅನುಭವಿ ಗಗನಯಾತ್ರಿಗಳು ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು