3:00 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ISS | ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಸ್ಪೇಸ್‌ಎಕ್ಸ್ ಕ್ಯಾಪ್ಸುಲ್: ಸುನೀತಾ ವಿಲಿಯಂ, ವಿಲ್ಮೋರ್ ಭೂಮಿಗೆ ಮರಳುವ ಹಾದಿ ಸುಗಮ

16/03/2025, 23:30

reporterkarnataka.com

ಸ್ಪೇಸ್‌ಎಕ್ಸ್ ಕ್ಯಾಪ್ಸುಲ್ ಭಾನುವಾರ ಮುಂಜಾನೆ ನಾಲ್ವರು ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಯಶಸ್ವಿಯಾಗಿ ತಲುಪಿಸಿದ್ದು, ಇದರೊಂದಿಗೆ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಮರಳಿ ಭೂಮಿಗೆ ಕರೆದು ತರುವ ಹಾದಿ ಸುಗಮವಾಗಿದೆ.
ಸುಮಾರು 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರನ್ನು ಮನೆಗೆ ಕರೆತರುವ ಗುರಿಯನ್ನು ಇದು ಹೊಂದಿದೆ.
ಶುಕ್ರವಾರ ಸಂಜೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯೊಂದಿಗೆ ಸ್ಪೇಸ್ ಎಕ್ಸ್ ನಾಸಾದ ಕ್ರ್ಯೂ -10 ನಾಲ್ವರು ಗಗನಯಾತ್ರಿಗಳನ್ನು ಹೊತ್ತು ಪ್ರಯಾಣ ಪ್ರಾರಂಭಿಸಿತ್ತು. ಸುಮಾರು 29 ಗಂಟೆಗಳ ನಂತರ ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ಭಾನುವಾರದಂದು ಬೆಳಿಗ್ಗೆ 4:04 GMT ಕ್ಕೆ ISS ನೊಂದಿಗೆ ಡಾಕ್ ಮಾಡಿತು.
ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಅಸಮರ್ಪಕ ಕಾರ್ಯದಿಂದ
ಸುನಿತಾ ಮಿಲಿಯಂ ಮತ್ತು ವಿಲ್ಮೋರ್ ಅವರು ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದರು. ಇದರಿಂದ ವಿಲ್ಮೋರ್ ಮತ್ತು ವಿಲಿಯಮ್ಸ್ ಅವರನ್ನು ಮರಳಿ ಭೂಮಿಗೆ ಕರೆದು ತರುವ ಕಾರ್ಯ ವಿಳಂಬವಾಗಿತ್ತು.
ಮೂಲತಃ, ಈ ಇಬ್ಬರು ಅನುಭವಿ ಗಗನಯಾತ್ರಿಗಳು ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು