ಇತ್ತೀಚಿನ ಸುದ್ದಿ
ಬಸವಣ್ಣನ ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
30/04/2025, 14:48

ಬೆಂಗಳೂರು(reporterkarnataka.com): ಬಸವಣ್ಣನ ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.