1:14 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ

27/05/2025, 23:56

ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.
ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು.
ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.
ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.
ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.


ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.
ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು