5:40 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ

27/05/2025, 23:56

ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.
ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು.
ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.
ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.
ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.


ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.
ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು