11:19 AM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ

27/05/2025, 23:56

ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.
ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು.
ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.
ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.
ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.


ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.
ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು