12:29 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ

27/05/2025, 23:56

ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.
ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು.
ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.
ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.
ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.


ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.
ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು