7:08 PM Sunday1 - February 2026
ಬ್ರೇಕಿಂಗ್ ನ್ಯೂಸ್
ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ

ಇತ್ತೀಚಿನ ಸುದ್ದಿ

ಐತಿಹಾಸಿಕ ಗುಜ್ಜರಕೆರೆ ಅತಿಕ್ರಮಣ ತೆರವಿಗೆ ಶೀಘ್ರದಲ್ಲೇ ಸರ್ವೆ: ಮೇಯರ್ ಪ್ರೇಮಾನಂದ ಶೆಟ್ಟಿ ಭರವಸೆ

02/06/2021, 06:52

ಮಂಗಳೂರು(reporterkarnataka news): ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಗುಜ್ಜರಕೆರೆ ಅಭಿವೃದ್ಧಿ  ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು  ಮೇಯರ್ ಪ್ರೇಮಾನಂದ ಶೆಟ್ಟಿ ಅವರು ನಡೆಸಿದರು.

ಈ ಸಂದರ್ಭ ಕೆರೆಯ ಭೂ ಅತಿಕ್ರಮಣ, ಕೆರೆಯ ಸುತ್ತಲು ಅಗತ್ಯಕ್ಕಿಂತ ಅಗಲ ಮಣ್ಣು ಹಾಕಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿರುವ ಕುರಿತು ಸ್ಥಳೀಯರು ಮೇಯರ್  ಗಮನಕ್ಕೆ ತಂದರು. ಈ ಬಗ್ಗೆ ಎಂಜಿನಿಯರ್ ಅವರಿಂದ ಮಾಹಿತಿ ಪಡೆದ ಮೇಯರ್ ಅವರು  ಆದಷ್ಟು ಶೀಘ್ರದಲ್ಲಿ ಕೆರೆಯ ಜಮೀನು ಸರ್ವೇ ಕಾರ್ಯ ನಡೆಸುವ ಕುರಿತಾಗಿ ಸ್ಥಳೀಯರಿಗೆ ಭರವಸೆ ನೀಡಿದರು.

ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ್ ಭಾನುಮತಿ ಪಿ.ಎಸ್. , ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಕುಮಾರ್ ಜೆಪ್ಪು, ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ ಗುಜ್ಜರಕೆರೆ ಹಾಗೂ ಸ್ಥಳೀಯರಾದ  ಮಾಧವ ಗುಜ್ಜರಕೆರೆ ,  ಉದಯ ಶಂಕರ್ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು